Breaking News | ಆಳಂದ ಮತದಾರರ ಪಟ್ಟಿ ಅಕ್ರಮ; ತನಿಖೆಗೆ ಎಸ್‌ಐಟಿ ರಚನೆ ಸಾಧ್ಯತೆ

Date:

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಆರು ಸಾವಿರದಷ್ಟು ಮತದಾರರನ್ನು ಮತ ಪಟ್ಟಿಯಿಂದ ಅಳಿಸುವ ಪ್ರಯತ್ನವನ್ನು ಮಾಡಲಾಗಿದೆ ಎಂಬ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಶೀಘ್ರವೇ SIT ರಚನೆ ಮಾಡಲಿದೆ. ಬಿ ಕೆ ಸಿಂಗ್‌ ಅವರು ಅದರ ಮುಖ್ಯಸ್ಥರಾಗಲಿದ್ದಾರೆ ಎಂಬ ಮಾಹಿತಿ ಈ ದಿನ.ಕಾಮ್‌ಗೆ ಲಭ್ಯವಾಗಿದೆ.

ಪಕ್ಷದ ತೀರ್ಮಾನದಂತೆ ಮುಂದಿನ ನಡೆ- ಬಿ ಆರ್‌ ಪಾಟೀಲ್

“ಇಂದು ಆಳಂದ ಕ್ಷೇತ್ರದ ಚುನಾವಣಾ ಅಕ್ರಮದ ಬಗ್ಗೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಅವರು ಮಾಡಿರುವ ಅಷ್ಟೂ ಆರೋಪಗಳು ನಿಜ. ಚುನಾವಣಾ ಆಯೋಗದ ನಡವಳಿಕೆ ಅನುಮಾನ ಹುಟ್ಟಿಸಿದೆ. ಸಿಐಡಿಯವರು ಹದಿನೆಂಟು ಬಾರಿ ದಾಖಲೆಗಳನ್ನು ಕೇಳಿದರೂ ಕೊಟ್ಟಿಲ್ಲ. ಅವರು ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ. ಪಕ್ಷದ ತೀರ್ಮಾನದಂತೆ ನನ್ನ ಮುಂದಿನ ನಡೆ ಇರಲಿದೆ. ರಾಹುಲ್‌ ಗಾಂಧಿ ಅವರು ಒಂದು ವಾರದ ಅವಕಾಶ ನೀಡಿದ್ದಾರೆ” ಎಂದು ಬಿ ಆರ್‌ ಪಾಟೀಲ್‌ ಅವರು ದೆಹಲಿಯಿಂದ ಈದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಮತಗಳವು | ಪ್ರತಿಕ್ರಿಯಿಸುವ ಭರದಲ್ಲಿ ಬೆತ್ತಲಾದ ಚುನಾವಣಾ ಆಯುಕ್ತ

ಆಗಸ್ಟ್‌ ಏಳರಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್‌ ಗಾಂಧಿ ಅವರು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಮಹಾದೇವಪುರ ಕ್ಷೇತ್ರದಲ್ಲಿ ಒಂದೇ ಮನೆಗಳಲ್ಲಿ ಹಲವು ಮತದಾರರ ವಿಳಾಸವಿದ್ದು, ಅವರೆಲ್ಲ ಬೇರೆ ರಾಜ್ಯದವರಾಗಿದ್ದಾರೆ. ಅಷ್ಟೇ ಅಲ್ಲ ಒಂದೇ ಕ್ಷೇತ್ರ ಬೇರೆ ಬೇರೆ ವಾರ್ಡ್‌ಗಳಲ್ಲೂ ಮತದಾರರಾಗಿದ್ದಾರೆ. ಕೇವಲ ಐದಾರು ತಿಂಗಳಲ್ಲಿ ಒಂದು ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿರುವುದನ್ನು ಕಾಂಗ್ರೆಸ್‌ ಪತ್ತೆ ಹಚ್ಚಿತ್ತು.

ಇದೀಗ ಆಳಂದ ಕ್ಷೇತ್ರದ ಮತದಾರರ ಪಟ್ಟಿ ಹಗರಣದ ಬಗ್ಗೆ ರಾಹುಲ್‌ ಗಾಂಧಿ ದೇಶದ ಗಮನ ಸೆಳೆದಿದ್ದಾರೆ. ರಾಹುಲ್‌ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಚುನಾವಣಾ ಆಯೋಗ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕಸರತ್ತು ಮಾಡುತ್ತಿದೆ ಎಂಬುದಕ್ಕೆ ಇಂದಿನ ಆಯೋಗದ ಹೇಳಿಕೆಯೇ ಸಾಕ್ಷಿ. ರಾಹುಲ್ ಆರೋಪಗಳನ್ನು ಅಲ್ಲಗಳೆದಿರುವ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್, ”ಆರೋಪಗಳು ಆಧಾರರಹಿತ. ಸಾರ್ವಜನಿಕರು ಆನ್‌ಲೈನ್‌ನಲ್ಲಿ ಯಾವುದೇ ಮತಗಳನ್ನು ಅಳಿಸಲು ಸಾಧ್ಯವಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತಗಳನ್ನು ಅಳಿಸಿ ಹಾಕುವ ಯತ್ನ ನಡೆದಿವೆ. ಮತದಾರರ ಪಟ್ಟಿಯಲ್ಲಿರುವ ಯಾರದ್ದೋ ಹೆಸರನ್ನು ಅಳಿಸಿ ಹಾಕುವಂತೆ ಇನ್ಯಾರದ್ದೋ ಹೆಸರಿನಲ್ಲಿ ಮತ್ಯಾರೋ ಅರ್ಜಿ ಸಲ್ಲಿಸಿದ್ದಾರೆ. ಇದೇ ರೀತಿ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸಿ ಹಾಕುವ ಹುನ್ನಾರ ನಡೆದಿದೆ ಎಂಬುದು ರಾಹುಲ್‌ ಅವರ ಆರೋಪ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...