BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 6ರಲ್ಲಿ ಮೂಳೆ ಪತ್ತೆ

Date:

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಎರಡು ದಿನಗಳಿಂದ ಗುರುತು ಮಾಡಿದ ಜಾಗಗಳಲ್ಲಿ ಮಣ್ಣು ಅಗೆದು ಅಸ್ತಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿದೆ. ಇಂದು ಹತ್ತು ಗಂಟೆಯ ಸುಮಾರಿಗೆ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ ಮೂಳೆಗಳು ಸಿಕ್ಕಿವೆ, ತಲೆ ಬುರುಡೆ ಸಿಕ್ಕಿಲ್ಲ ಎಂದು ಎಸ್‌ಐಟಿ ಮೂಲಗಳಿಂದ ಈ ದಿನ.ಕಾಮ್‌ಗೆ ಮಾಹಿತಿ ಸಿಕ್ಕಿದೆ.

ಈ ಮೂಳೆಗಳು ಸೊಂಟದ ಕೆಳಭಾಗದವು ಎಂದು ಖಚಿತಪಡಿಸಿದ್ದಾರೆ. ಅಗೆಯುವ ಕೆಲಸ ಮುಂದುವರಿದಿದೆ. ಅವಶೇಷ ಸಿಕ್ಕ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ತಜ್ಞರು ಭೇಟಿ ನೀಡುತ್ತಿದ್ದಾರೆ. ಅಲ್ಲದೇ ಡಾಗ್ ಸ್ಕ್ವಾಡ್ ಕೂಡ ಬಂದಿದೆ. ನಿನ್ನೆ ಮೊನ್ನೆ ಈ ರೀತಿಯ ತೀವ್ರ ಕಾರ್ಯಾಚರಣೆ ಇರಲಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...