ಬುರ್ಕಾನ್ ಗ್ರೂಪ್ ನಿಂದ ಎಐ ಸರ್ವರ್ ಉತ್ಪಾದನೆ, ₹1,500 ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

Date:

ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬುರ್ಕಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ರಾಜ್ಯದಲ್ಲಿ ಕೃತಕ ಬುದ್ಧಿ ಮತ್ತೆ ತಂತ್ರಜ್ಞಾನ ದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ಎಐ ಸರ್ವರ್ ಗಳ ಉತ್ಪಾದನೆಗೆ 1,500 ಕೋಟಿ ರೂಪಾಯಿ ಬಂಡವಾಳ ಹೂಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಬುರ್ಕಾನ್ ಸಮೂಹದ ಸಿಇಒ ಶಫಿ ಎಂ ಖಾನ್ ಮತ್ತು ಅವರ ತಂಡದೊಂದಿಗೆ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ವಿಸ್ತೃತ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಅವರು, “ಇದು ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ ಉತ್ಪಾದನಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೇಟಾ ಸೆಂಟರ್ ಗಳಲ್ಲಿ ಬಳಕೆಯಾಗುವ ಈ ಸರ್ವರ್ ಗಳಿಗೆ ವಿಪರೀತ ಬೇಡಿಕೆ ಇದ್ದು ಬೇರೆ ಬೇರೆ ದೇಶಗಳಿಗೆ ರಫ್ತು ಕೂಡ ಮಾಡುವುದಾಗಿ ಕಂಪನಿಯವರು ಹೇಳಿದ್ದು, ಅದಕ್ಕೆ ಪೂರ್ಣ ಸಹಕಾರ ನೀಡಲಾಗುವುದು. ಸಹಾಯಧನ ಇತ್ಯಾದಿ ವಿಚಾರಗಳ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಲು ಪ್ರಧಾನ ಕಾರ್ಯದರ್ಶಿ ಅವರಿಗೆ ಸಚಿವರು ಸೂಚಿಸಿದರು.

ಇದಲ್ಲದೆ, ಬುರ್ಖಾನ್ ಸಮೂಹವು ಅತ್ಯಾಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್ ಸ್ವಿಚ್ ಉತ್ಪಾದನೆ ಆರಂಭಿಸುವುದಕ್ಕೂ ಬಯಸಿದೆ. ಇದಕ್ಕಾಗಿ ಅದು ಜಾಗತಿಕ ಮಟ್ಟದಲ್ಲಿ ತನ್ನ ತಾಂತ್ರಿಕ ಪಾಲುದಾರ ಕಂಪನಿಗಳಾದ ಸೂಪರ್-ಮೈಕ್ರೋ, ಗಿಗಾಬೈಟ್ ಮತ್ತು ಸೆರಾ ನೆಟ್ವರ್ಕ್ ಜತೆ ರಾಜ್ಯದಲ್ಲಿ ಬಂಡವಾಳ ಹೂಡಲು ಬಯಸಿದೆ. ಸರಕಾರ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದಿದ್ದಾರೆ.

ಬುರ್ಕಾನ್ ಕಂಪನಿಯ ಹೂಡಿಕೆಯಿಂದ ಸೆಮಿಕಂಡಕ್ಟರ್, ಎಐ ಹಾರ್ಡ್-ವೇರ್ ಮತ್ತು ಆಧುನಿಕ ಎಲೆಕ್ಟ್ರಾನಿಕ್ಸ್ ಕಾರ್ಯಪರಿಸರದ ಬಲವರ್ಧನೆಯಾಗಲಿದೆ. ಅದು ಉತ್ಪಾದನಾ ಪ್ರಕ್ರಿಯೆಯಲ್ಲಿ ರೆಸೊಲ್ಯೂಟ್ ಗ್ರೂಪ್ ಮತ್ತು ಕ್ವಾಡ್-ಜೆನ್ ಕಂಪನಿಗಳ ಸಹಯೋಗ ಹೊಂದಲು ಬಯಸಿದೆ. ಇದರಿಂದ ಸ್ಥಳೀಯವಾಗಿಯೇ ಆರ್ & ಡಿ ಅಭಿವೃದ್ಧಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳೊಂದಿಗೆ ಸಹಭಾಗಿತ್ವ ಕೈಗೂಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಂಪನಿಯು ಭಾರತ ಮತ್ತು ಇಎಂಇಎ ವಲಯಗಳಲ್ಲಿ ತಾನು ಒದಗಿಸಲಿರುವ ಸೇವೆಗಳಿಗೆ ಬೆಂಗಳೂರನ್ನು ಉತ್ಕೃಷ್ಟತಾ ಕೇಂದ್ರವನ್ನಾಗಿ ಮಾಡಿಕೊಳ್ಳಲಿದೆ. ಜತೆಗೆ ರಾಜ್ಯಾದ್ಯಂತ ವಿಶೇಷ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಒಟ್ಟಾರೆಯಾಗಿ ಅದು ನಮ್ಮೊಂದಿಗೆ ಬೃಹತ್ ಕೈಗಾರಿಕೆ, ಐಟಿ-ಬಿಟಿ ಮತ್ತು ಇಎಸ್ಡಿಎಂ ಕ್ಷೇತ್ರಗಳಲ್ಲಿ ಪಾಲುದಾರಿಕೆಯ ಅವಕಾಶಗಳನ್ನು ಪರಿಶೀಲಿಸುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಿಗ್ಗಾವ್ ಶಾಸಕ ಯಾಸಿರ್ ಅಹಮದ್ ಪಠಾಣ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಕ್ವಾಡ್-ಜೆನ್ ಕಂಪನಿ ಅಧ್ಯಕ್ಷ ಸಿ.ಎಸ್.ರಾವ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...