ಎಲ್ಲ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

  • ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು
  • ಮೈಸೂರು ಜಿಲ್ಲೆಯ ಜನರ ಋಣ ತೀರಿಸೋಕೆ ನಾವು ಬದ್ದರಾಗಿದ್ದೇವೆ: ಸಿಎಂ

ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ಕೊಡ್ತೀವಿ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ. ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ದವಾಗಿದ್ದೇನೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ” ಎಂದರು.

ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ಜಿ.ಟಿ. ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡ, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...