ಬಿ ಆರ್ ಪಾಟೀಲ್ ಪತ್ರಕ್ಕೆ ಉತ್ತರಿಸಲಾರೆ, ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ: ಕೃಷ್ಣಬೈರೇಗೌಡ

Date:

  • ಅನಗತ್ಯವಾಗಿ ವಿವಾದ ಸೃಷ್ಟಿಸಲು ನಾನು ಇಲ್ಲಿಗೆ ಬಂದಿಲ್ಲ
  • ಇಷ್ಟಕ್ಕೂ ಸದರಿ ಇಲಾಖೆ ನನಗೆ ಬರುವುದೇ ಇಲ್ಲ: ಬೈರೇಗೌಡ

ಸಚಿವರ ಹೇಳಿಕೆಯಿಂದ ನನಗೆ ಅಪಮಾನವಾಗಿದೆ. ನನ್ನ ಮೇಲಿನ ಆರೋಪದ ಕುರಿತು ತನಿಖೆಯಾಗಿ, ಆರೋಪ
ಮುಕ್ತವಾಗುವವರೆಗೂ ಸದನಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ ಆರ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕುರಿತು ಮುಖ್ಯಮಂತ್ರಿಗಳೇ ಮುಂದಿನ
ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ವಿಜಯಪುರದಲ್ಲಿ ಬುಧವಾರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಸದ್ಯ ವಿಜಯಪುರ ಜಿಲ್ಲೆಯ ಜನರ ಸಮಸ್ಯೆ ಇದ್ದರೆ ಮಾತ್ರ ತಮ್ಮೊಂದಿಗೆ ಚರ್ಚಿಸುತ್ತೇನೆ. ಅನಗತ್ಯವಾಗಿ ವಿವಾದ ಸೃಷ್ಟಿಸಲು ನಾನು ಇಲ್ಲಿಗೆ ಬಂದಿಲ್ಲ” ಎಂದರು.

“ಈ ಕುರಿತು ನಾನು ಸದನದಲ್ಲಿ ಉತ್ತರಿಸಿರುವ ವಿಷಯದ ಕುರಿತು ಮಾಹಿತಿ ನೀಡುತ್ತೇನೆ. ಸದನದಲ್ಲಿ ಏನು ಹೇಳಿದ್ದೇನೆ, ಏನು ಬಿಟ್ಟಿದ್ದೇನೆ ಎಂಬುದನ್ನು ನೀವೇ ತೀರ್ಮಾನಿಸಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಸಚಿವರ ಹೇಳಿಕೆಯಿಂದ ನನಗೆ ಅವಮಾನವಾಗಿದೆ ಎಂದು ಶಾಸಕ ಬಿ ಆರ್ ಪಾಟೀಲ್ ಹೇಳಿರುವ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ. ಸದ್ಯ ವಿಜಯಪುರ ಜಿಲ್ಲೆಯ ಪ್ರಗತಿ ಪರಿಶೀಲನಾ ಪ್ರವಾಸದಲ್ಲಿರುವ ನಾನು, ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

“ಭೂ ಸೇನಾ ನಿಗಮದಲ್ಲಿ ಹಣ ಇಲ್ಲ ಎಂಬ ವಿಚಾರದ ಕುರಿತಾಗಿ ಸದನದಲ್ಲಿನ ಮಾಹಿತಿಯ ಪ್ರತಿಯನ್ನೇ ಪತ್ರಕರ್ತರಿಗೆ ನೀಡುತ್ತೇನೆ, ನೀವೆ ನೋಡಿ ತಿಳಿಯಿರಿ” ಎಂದರು.

”ಇಷ್ಟಕ್ಕೂ ಸದರಿ ಇಲಾಖೆ ನನಗೆ ಬರುವುದೇ ಇಲ್ಲ. ಶಾಸಕ ಬಿ ಆರ್ ಪಾಟೀಲ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ತನಿಖೆ ಮಾಡುವುದು ಬಿಡುವುದು ಆ ಇಲಾಖೆಗೆ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟದ್ದು. ನನಗೆ ಸಂಬಂಧ ಇಲ್ಲದ ಇಲಾಖೆ ತನಿಖೆ ಕುರಿತು ನಾನು ಹೇಳಿಕೆ ನೀಡುವುದು ಸರಿಯಲ್ಲ” ಎಂದು ಹೇಳಿದರು.

“ರಾಜ್ಯದಲ್ಲಿ ಮಳೆ ಇಲ್ಲದೇ ಭೀಕರ ಬರ ಆವರಿಸಿದೆ. ಕಂದಾಯ ಇಲಾಖೆಯಲ್ಲಿ‌ ಜನರ ಹತ್ತು ಹಲವು ಸಮಸ್ಯೆಗಳಿವೆ. ಪ್ರತಿ ಜಿಲ್ಲೆಗೂ ಹೋಗಿ ಆಯಾ ಜಿಲ್ಲೆಯ ಸಮಸ್ಯೆ ಆಲಿಸಿ, ಪರಿಹಾರ ಕಾರ್ಯಕ್ಕೆ ಮುಂದಾಗಬೇಕಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...