ನಮ್ಮ ಬಳಿ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್

Date:

  • 5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ
  • ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ನೀರಿನ ಪ್ರಮಾಣ ದಾಖಲು

ಮೊದಲೇ ನಮ್ಮ ಬಳಿ ನೀರಿಲ್ಲ. ಇನ್ನು ತಮಿಳುನಾಡು ಕೇಳಿದಷ್ಟು ನೀರು ಬಿಡಲು ಹೇಗೆ ಆಗುತ್ತದೆ? ಯಾವುದೇ ಕಾರಣಕ್ಕೂ ನಾವು ನೀರು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಕಾವೇರಿ ವಿಚಾರವಾಗಿ ಮಾತನಾಡಿದ ಅವರು, “ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆಯುತ್ತಿದೆ. ತಮಿಳುನಾಡಿನವರು 12,500 ಕ್ಯೂಸೆಕ್ ನೀರಿಗೆ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ 5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ” ಎಂದರು.

“ಪ್ರತಿದಿನ ಎಷ್ಟು ನೀರು ಬರುತ್ತಿದೆ ಮತ್ತು ಹೊರ ಹೋಗುತ್ತಿದೆ ಎನ್ನುವ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ.‌ ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿರುತ್ತಾರೆ. ಅದರ ಮೇಲ್ವಿಚಾರಣೆ ಕಾವೇರಿ ನೀರು ನಿರ್ವಹಣಾ ಸಮಿತಿಯ ಬಳಿ ಇದೆ. ಆದಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಸುಳ್ಳು ಹೇಳಿದರೆ ನಮ್ಮ ಮುಂದೆ ವಾಸ್ತವಾಂಶ ಇಡುತ್ತಾರೆ. ತಾಂತ್ರಿಕ ವಿಚಾರಗಳನ್ನು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನೀಡುತ್ತಾರೆ. ನಾವು ಹೇಳಿದರೆ ಕೇಳುವುದಿಲ್ಲ. ಬೆಂಗಳೂರು ಸೇರಿದಂತೆ ಸುತ್ತಮುತ್ತ ಮಳೆ ಬಿದ್ದ ಪರಿಣಾಮ ಸ್ವಲ್ಪ ನೀರಿನ ಮಟ್ಟ ಹೆಚ್ಚಾಗಿದೆ” ಎಂದು ತಿಳಿಸಿದರು.

ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ

ರಾಜ್ಯದಲ್ಲಿ ಕನ್ನಡಿಗರ ಸರ್ಕಾರವಿಲ್ಲ, ಸ್ಟಾಲಿನ್ ಸರ್ಕಾರವಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, “ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಏನು ಹೇಳಿದ್ದರು? ಈಗ ಏನು ಪತ್ರ ಬರೆದಿದ್ದಾರೆ ಎಂದು ಗೊತ್ತಿದೆಯೇ ಅವರಿಗೆ? ನೀರಿನ ವಿಚಾರದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...