ಜಾತಿ ಗಣತಿ | ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ಬರೆಸಲು ತೀರ್ಮಾನ: ಸಾಣೇಹಳ್ಳಿ ಸ್ವಾಮೀಜಿ

Date:

ದಾವಣಗೆರೆಯಲ್ಲಿ ಮಂಗಳವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಧರ್ಮ ಮತ್ತು ಜಾತಿ ವಿಚಾರವಾಗಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, “ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಮತ್ತು ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ” ಎಂದು ತಿಳಿಸಿದರು.

“ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ನಮೂದಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸುತ್ತಿಲ್ಲ ಎಂಬ ಸುಳಿವು ಸಿಕ್ಕಿದೆ. ಧರ್ಮದ ಕಾಲಂನಲ್ಲಿ ಲಿಂಗಾಯತ ನಮೂದಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಇದಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವೂ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಸೌಲಭ್ಯ ಪಡೆಯುತ್ತಿವೆ. ಜಾತಿ ಗಣತಿಯಲ್ಲಿ ಒಳಪಂಗಡ ನಮೂದಿಸದೇ ಇದ್ದರೆ ಈ ಸೌಲಭ್ಯ ಕೈತಪ್ಪುವ ಅಪಾಯವಿದೆ. ಹೀಗಾಗಿ, ಒಕ್ಕೂಟ ಈ ತೀರ್ಮಾನ ಕೈಗೊಂಡಿದೆ” ಎಂದು ಹೇಳಿದರು.

“ಜಾತಿ ಗಣತಿಯಲ್ಲಿ ಹೀಗೆ ಬರೆಸಬೇಕು ಎಂಬ ಒತ್ತಡವನ್ನು ಜನರ ಮೇಲೆ ಹೇರುವುದಿಲ್ಲ. ಪಂಚಪೀಠಾಧೀಶರು ಸಿದ್ಧರಿದ್ದರೆ ಚರ್ಚಿಸಿ ಒಗ್ಗೂಡಿ ತೀರ್ಮಾನ ಕೈಗೊಳ್ಳಲು ಮುಕ್ತರಾಗಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅ.5ರಂದು ನಡೆಯುವ ಬಸವತತ್ವ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಪಂಚಪೀಠಾಧೀಶರು ಬರುವುದಾದರೆ ಸ್ವಾಗತ ಕೋರಲು ಸಿದ್ಧರಿದ್ದೇವೆ” ಎಂದು ತಿಳಿಸಿದರು.

“ಗುರು-ವಿರಕ್ತ ಭಾವನೆಯೇ ಲಿಂಗಾಯತ ಧರ್ಮದಲ್ಲಿ ಇಲ್ಲ. ಪಂಚಪೀಠಾಧೀಶರು ಜಾತಿ ಗಣತಿ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ವಿರೋಧವಿಲ್ಲ. ಹಾಗಂತ ಅವರು ಹೇಳಿದ ಎಲ್ಲವನ್ನೂ ನಾವು ಒಪ್ಪುವುದಿಲ್ಲ. ಬಸವ ತತ್ವ ಪುರಾಣ ಪರಂಪರೆ ಅಲ್ಲ. ಅವರಲ್ಲಿಯೂ ವೈಜ್ಞಾನಿಕ, ವೈಚಾರಿಕ ಮನೋಭಾವ ಬೆಳೆಯುತ್ತಿರುವುದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇವೆ” ಎಂದು ಹೇಳಿದರು.

ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ, ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಅಣಬೇರು ರಾಜಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...