ಕಾವೇರಿ ವಿವಾದ | ತಜ್ಞರ ಜತೆ ಚರ್ಚಿಸಿ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಭರವಸೆ

Date:

  • ರಾಜ್ಯದ ಹಿತದೃಷ್ಟಿಯಿಂದ ಹೋರಾಟವಾಗುವುದನ್ನು ಸ್ವಾಗತಿಸುತ್ತೇವೆ: ಸಿಎಂ
  • ಕುರುಬೂರು ಶಾಂತಕುಮಾರ್ ನೇತೃತ್ವದ ಹೋರಾಟಗಾರರ ನಿಯೋಗ ಸಿಎಂ ಭೇಟಿ

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.

“ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆ

“ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ಕೃಷಿ ಬಿಕ್ಕಟ್ಟು ಮತ್ತು ಎಂ ಎಸ್ ಸ್ವಾಮಿನಾಥನ್ ಸೃಷ್ಟಿಸಿದ ಚರಿತ್ರೆ

ಇಂದು ಸಂಜೆ ಸಭೆ

“ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು” ಎಂದು ಮುಖ್ಯಮಂತ್ರಿಗಳು ಪರಿಸ್ಥಿತಿಯನ್ನು ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್, “ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿದೆ. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕು”ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು” ಎಂದು ಹೇಳಿದರು. ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...