ಕಾವೇರಿ ವಿವಾದ | ಪ್ರತಿಭಟನೆ ಮಾಡಲಿ, ಕರ್ನಾಟಕ ಬಂದ್‌ಗೆ ಅವಕಾಶವಿಲ್ಲ: ಡಿಕೆಶಿ

Date:

  • ಕರ್ನಾಟಕ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ
  • ರಾಜ್ಯಾದ್ಯಂತ ನಾನಾ ಸಂಘಟನೆಗಳ ಬೆಂಬಲ

ಕಾವೇರಿ ವಿಚಾರವಾಗಿ ಪ್ರತಿಭಟನೆ ಮಾಡಲು ನಾವು ಯಾರಿಗೂ ಅಡ್ಡಿ ಮಾಡಲ್ಲ. ಆದರೆ ಕರ್ನಾಟಕ ಬಂದ್‌ಗೆ ಅವಕಾಶ ಕೊಡಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ವಾಟಾಳ್‌ ನಾಗರಾಜ್‌ ಕರೆ ನೀಡಿರುವ ಕರ್ನಾಟಕ ಬಂದ್‌ ವಿಚಾರವಾಗಿ ಪ್ರತಿಕ್ರಿಯಿಸಿ, “ನಾಳೆ ಸಾರ್ವಜನಿಕರಿಗೆ ರಕ್ಷಣೆ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಕೂಡ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು” ಎಂದರು.

“ಬಂದ್‌ಗೆ ಕರೆ ನೀಡಿರುವ ಸಂಘಟನಾಕಾರರು ದಯವಿಟ್ಟು ಕಾನೂನು ಪಾಲಿಸಲಿ. ಬಂದ್ ಮಾಡದೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಅಹಿತಕರ ಘಟನೆಗಳು ನಡೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್‌ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಬಂದ್‌ಗೆ ಸಂಘಟನೆಗಳಿಂದ ಭಾರೀ ಬೆಂಬಲ; ರಸ್ತೆಗಿಳಿಯುವ ಮುನ್ನ ಇರಲಿ ಎಚ್ಚರ

ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಚಾರವಾಗಿ ಬಹಳಷ್ಟು ಜನರಿಗೆ ಸಿಟ್ಟಿದೆ. ಈ ಬಗ್ಗೆ ಕೆಲವು ಕಡೆ ಕಾಂಗ್ರೆಸ್‌ ಸೇರುವ ಬಗ್ಗೆ ಕೆಲವು ನಾಯಕರು ಮುಂದೆ ಬಂದಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ” ಎಂದರು.

“ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲು ಸಲಹೆ ಪಡೆಯಲಾಗುತ್ತಿದೆ. ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲ ಭಾಗದ ನಾಯಕರ ಜತೆ ಎಂಎಲ್‌ಸಿ ಚುನಾವಣೆ ಬಗ್ಗೆ ಚರ್ಚೆ ನಡಸಲಾಗುತ್ತಿದೆ” ಎಂದು ಹೇಳಿದರು.

ಹರಿಪ್ರಸಾದ್ ಹಾಗೂ ಮುನಿಯಪ್ಪ ಅವರ ಭೇಟಿ ಬಗ್ಗೆ ಕೇಳಿದಾಗ, ಬಿ.ಕೆ.ಹರಿಪ್ರಸಾದ್ ಮತ್ತು ಮುನಿಯಪ್ಪ ಅವರು ಲೋಕಸಭೆ ಚುನಾವಣೆಯ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದರು. ಇದೇ ವೇಳೆ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಿ ಎಂದು ಮುನಿಯಪ್ಪ ಅವರು ಸಲಹೆ ನೀಡಿದ್ದಾರೆ” ಎಂದು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...