ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಸಿಬಿಐನಿಂದ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ

Date:

ದೇಶದ ಅತ್ಯಂತ ದೊಡ್ಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ನಿಗೆ ಕೇಂದ್ರೀಯ ತನಿಖಾ ದಳ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆಯಿದೆ.

ಸಿಬಿಐನ ಬ್ಲೂ ಕಾರ್ನರ್‌ ನೋಟಿಸ್‌ ವಿದೇಶದಲ್ಲಿರುವ ಅಪರಾಧಿಗಳನ್ನು ಕರೆತರುವ ಪ್ರಕ್ರಿಯೆಯಾಗಿದೆ. ಆರೋಪಿ ಇರುವ ದೇಶದಲ್ಲಿಯೇ ಅಲ್ಲಿನ ಸರ್ಕಾರ ಬಂಧಿಸಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುತ್ತದೆ. ನಂತರದಲ್ಲಿ ಇಲ್ಲಿನ ಪೊಲೀಸ್ ತಂಡ ತೆರಳಿ ಆರೋಪಿಯನ್ನು ಬಂಧಿಸಿ ಕರೆತರುತ್ತದೆ.

33 ವರ್ಷದ ಪ್ರಜ್ವಲ್‌ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಗಳನ್ನು ಎದುರಿಸುತ್ತಿದ್ದು, ಕರ್ನಾಟಕ ಸರ್ಕಾರ ಈತನ ವಿರುದ್ಧ ದೌರ್ಜನ್ಯಗಳನ್ನು ತನಿಖೆಗೊಳಪಡಿಸಲು ಎಸ್‌ಐಟಿ ರಚಿಸಿದೆ. ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣವೂ ಸೇರಿ ಮೂವರು ಮಹಿಳೆಯರು ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್‌ನನ್ನು ವಿದೇಶಕ್ಕೆ ತೆರಳಲು ಸಹಕರಿಸಿದ ಕಾರಣ ಈತನ ತಂದೆ ಹೆಚ್‌ ಡಿ ರೇವಣ್ಣನ ವಿರುದ್ಧ ಎಸ್‌ಐಟಿ ಲುಕ್‌ಔಟ್‌ ನೋಟಿಸ್ ಜಾರಿಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 700ಕ್ಕೂ ಹೆಚ್ಚು ನಾಗರಿಕರು ಪ್ರಜ್ವಲ್‌ ರೇವಣ್ಣನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ತನಿಖೆ ಕುರಿತು ವಿಶೇಷ ತನಿಖಾ ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಂಜೆ ತುರ್ತುಸಭೆ ನಡೆಸಿದರು.

ಸಭೆಯ ವೇಳೆ ಮುಖ್ಯಮಂತ್ರಿಗಳಿಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಿಬಿಐನಿಂದ ಪ್ರಜ್ವಲ್‌ ರೇವಣ್ಣಗೆ ಬ್ಲೂಕಾರ್ನರ್‌ ನೋಟಿಸ್‌ ನೀಡುವ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವಿಶೇಷ ತನಿಖಾ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ತಮ್ಮ ತಾಯಿಯನ್ನು ಅಪಹರಿಸಿದ್ದಾರೆ ಎಂದು ಸಂತ್ರಸ್ತೆಯ 20 ವರ್ಷದ ಪುತ್ರ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...