ಕದನ ವಿರಾಮ ಉಲ್ಲಂಘನೆ | ಪಾಕ್‌ ವಿರುದ್ಧದ ದಾಳಿಗೆ ಸೇನೆಗೆ ಮುಕ್ತ ಅಧಿಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

ಕದನ ವಿರಾಮ ಘೋಷಣೆಯಾದ ಮೇಲೂ ಪಾಕಿಸ್ತಾನ ದಾಳಿ ಮುಂದುವರಿಸಿ ಇಬ್ಬಗೆ ನೀತಿ ಪ್ರದರ್ಶಿಸಿದ್ದು, ಭಾರತೀಯ ಸೇನೆ ಇದಕ್ಕೆ ಪ್ರತ್ಯುತ್ತರ ಕೊಡುತ್ತದೆ. ಪಾಕ್‌ ವಿರುದ್ಧದ ದಾಳಿಗೆ ಕೇಂದ್ರ ಸರ್ಕಾರ ಸೇನೆಗೆ ಮುಕ್ತ ಅಧಿಕಾರ, ಸ್ವಾತಂತ್ರ್ಯ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕರ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಮಾದ್ಯಮದವರೊಂದಿಗೆ ಮಾತನಾಡಿ, “ಪಾಕಿಸ್ತಾನ ಯಾವತ್ತೂ ದ್ವಂದ್ವ ನಿಲುವು ಮತ್ತು ಇಬ್ಬಗೆ ನೀತಿ ಅನುಸರಿಸುವಲ್ಲಿ ಎತ್ತಿದ ಕೈ ಎಂಬುದು ಗೊತ್ತೇಯಿದೆ. ಅಲ್ಲದೇ, ಅಲ್ಲಿನ ಮಿಲಿಟರಿ ಪಡೆ ಚುನಾಯಿತ ಸರ್ಕಾರದ ಮಾತು ಕೇಳುವುದಿಲ್ಲ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ” ಎಂದರು.

“ಪಹಲ್ಗಾಮ್‌ ಭಯೋತ್ಪಾದನಾ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ನಮ್ಮ ಸರ್ಕಾರ ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತೀಕಾರದಲ್ಲಿ ತೊಡಗಿದೆ. ಬಹು ದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ಸೇನೆ ಮೊದಲ ದಿನವೇ ಪಾಕಿಸ್ತಾನದ 9ಕ್ಕಿಂತ ಹೆಚ್ಚು ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದೆ. ಈ ದಾಳಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಕುಟುಂಬಗಳು ಬಲಿಯಾಗಿವೆ. ಸಾಕಷ್ಟು ಭಯೋತ್ಪಾದಕ ಅಡಗುತಾಣಗಳು ಛಿದ್ರವಾಗಿವೆ. ಪ್ರಮುಖ ಉಗ್ರರು ಹತರಾಗಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ಯುದ್ಧವಾಗಿ ಪರಿಗಣಿಸುವ ಕಠಿಣ ನಿಲುವು

“ದೇಶದಲ್ಲಿ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗೆ ಪಣ ತೊಟ್ಟ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ಅತ್ಯಂತ ಕಠೋರ ನಿಲುವು ತೆಗೆದುಕೊಂಡಿದೆ. ಪಾಕ್‌ ಕದನ ವಿರಾಮಕ್ಕೂ ಮೊದಲೇ ಭಯೋತ್ಪಾದನೆಯನ್ನು ಯುದ್ಧವಾಗಿ ಪರಿಗಣಿಸುವಂತಹ ಅಭೂತಪೂರ್ವ ನಿರ್ಣಯ ಕೈಗೊಂಡಿದೆ” ಎಂದು ಹೇಳಿದರು.

ಕದನ ವಿರಾಮ ಪ್ರಸ್ತಾಪಿಸಿದ್ದ ಪಾಕ್‌

“ಪಾಕಿಸ್ತಾನದ ಡಿಜಿಎಂಒ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಫೋನ್‌ ಮಾಡಿ ಕದನ ವಿರಾಮಕ್ಕೆ ವಿನಂತಿ ಮಾಡಿದ್ದರು. ಆದರೀಗ ಅದನ್ನು ಉಲ್ಲಂಘಿಸಿದ್ದಾರೆ. ಯಾವತ್ತೂ ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸಿಕೊಂಡು ಬಂದ ಪಾಕ್‌ಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಡುತ್ತದೆ” ಎಂದರು.

ಇಡೀ ದೇಶ ಒಂದಾಗಿ ಹೋರಾಡುತ್ತಿದೆ

“ಪಹಲ್ಗಾಮ್‌ ದಾಳಿಯ ನಂತರ ಇದೇ ಮೊದಲ ಬಾರಿ ಭಯೋತ್ಪಾದನೆ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಭಾರತೀಯ ಸೇನೆ ಅತ್ಯಂತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪ್ರತೀಕಾರದ ದಾಳಿಯಲ್ಲಿ ನಮ್ಮ ಕಂದಹಾರ ಪ್ರಕರಣದಲ್ಲಿದ್ದವರು ಮತ್ತು ಪ್ರಮುಖ ಉಗ್ರರನ್ನು, ಅವರ ಕುಟುಂಬಗಳು ಹತರಾಗಿದ್ದಾರೆ. ಭಾರತ ಶಾಂತಿಪ್ರಿಯ ರಾಷ್ಟ್ರ. ಭಾರತೀಯರು ಯಾವತ್ತೂ ಶಾಂತಿಪ್ರಿಯರೇ, ನಾವಾಗಿಯೇ ಯಾವತ್ತೂ ಯಾರ ಮೇಲೂ ದಂಡೆತ್ತಿ ಹೋಗುವುದಿಲ್ಲ. ಆದರೆ, ನಮ್ಮ ಮೇಲೆ ಯಾರಾದರೂ ಬಂದರೆ ಸುಮ್ಮನೆ ಬಿಡುವ ಮಾತೇ ಇಲ್ಲ. ಭಾರತ-ಭಾರತೀಯರಿಗೆ ಅಂತದ್ದೊಂದು ಶಕ್ತಿಯಿದೆ” ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...