ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

Date:

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು. ಈ ನಿರ್ಧಾರವನ್ನು ಖಂಡಿಸಿ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದ ಎರಡೇ ದಿನಗಳಲ್ಲಿ ಅವರಿಗೆ ಅಮೆರಿಕ ಪ್ರವಾಸ ನಿರ್ಬಂಧ ತೆರವು ಮಾಡಲಾಗಿದೆ.

ಕೇಂದ್ರ ಸರ್ಕಾರ ಈ ಬಗ್ಗೆ ಮರು ಆದೇಶ ಹೊರಡಿಸಿದ್ದು, ಈ ಬಗ್ಗೆ ಸ್ವತಃ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಜೊತೆಗೆ ಇದೆ ವೇಳೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕ್ ಖರ್ಗೆ ಜೂನ್ 14ರಿಂದ 27ರವರೆಗೆ ಬೋಸ್ಟನ್ ಬಯೋ 2025 ಮತ್ತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಈ ವರ್ಷದ ಆಟೋಮೇಶನ್ ಕಾನ್ನರೆನ್ಸ್ ನಲ್ಲಿ ಭಾಗವಹಿಸಲು ಖರ್ಗೆ ಅಮೆರಿಕಕ್ಕೆ ಭೇಟಿ ನೀಡಬೇಕಿತ್ತು. ಆದರೆ ಪ್ರಿಯಾಂಕ್ ಫ್ರಾನ್ಸ್ ನಲ್ಲಿ ಇದ್ದ ವೇಳೆ ಅಮೆರಿಕ ಭೇಟಿ ಅನುಮತಿಯನ್ನು ಕೇಂದ್ರ ನಿರಾಕರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಅಮೆರಿಕ ಪ್ರವಾಸ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಯೂ ಟರ್ನ್ ತೆಗೆದುಕೊಂಡಿದ್ದು, ಮೊದಲಿನ ನಿರ್ಧಾರವನ್ನು ಹಿಂಪಡೆದು, ಭೇಟಿಗೆ ಅನುಮತಿ ನೀಡಿದೆ” ಎಂದು ಶನಿವಾರ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

“ಅಮೆರಿಕ ಭೇಟಿಗಾಗಿ ಮೇ 15ರಂದು ಅನುಮತಿ ಕೇಳಲಾಗಿತ್ತು. ಆದರೆ ಪತ್ರಿಕಾಗೋಷ್ಠಿ ನಡೆಸಿ ಆಕ್ಷೇಪ ಎತ್ತಿದ ಬೆನ್ನಲ್ಲೇ ಜೂನ್ 19ರಂದು ಕೇಂದ್ರದಿಂದ ಆಕ್ಷೇಪಣೆ ಇಲ್ಲ ಎಂಬ ಪತ್ರ ಸ್ವೀಕರಿಸಿರುವುದಾಗಿ ಪ್ರಿಯಾಂಕ್ ಖರ್ಗೆ ಮಾಹಿತಿ ನಡಿದ್ದಾರೆ.

“ಸ್ಪಷ್ಟ ಕಾರಣ ನೀಡದೇ ಅನುಮತಿ ನಿರಾಕರಿಸಿದ್ದಕ್ಕೆ ರಾಜಕೀಯ ಕಾರಣ ಅಲ್ಲದೆ ಇನ್ನೇನಿರಲು ಸಾಧ್ಯ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದರು. ಸಚಿವ ಜೈಶಂಕರ್ ಅವರಿಗೆ 2 ಪುಟಗಳ ಪತ್ರ ಬರೆದು ಔಪಚಾರಿಕ ಸ್ಪಷ್ಟಿಕರಣ ನೀಡಬೇಕೆಂದು ಪ್ರಿಯಾಂಕ್ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...