ಕೇಂದ್ರ ಸರ್ಕಾರದ ಜಿಎಸ್ ಟಿ ಸ್ಲಾಬ್ ಪರಿಷ್ಕರಣೆ ಯಿಂದ ಕೇವಲ ಉದ್ಯಮಿ ಗಳಿಗೆ ಲಾಭವಾಗಲಿದ್ದು ಬಡವರಿಗೆ ಹೆಚ್ಚಿನ ರೀತಿಯ ಉಪಯೋಗವಾಗದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಡವರಿಗೆ ಮನೆ ಕಟ್ಟಿ ಕೊಡುವ ವಸತಿ ಯೋಜನೆಗಳಿಗೆ ಜಿಎಸ್ ಟಿ ವಿನಾಯಿತಿ ಕೊಡಬೇಕು ಎಂದು ಕೇಂದ್ರ ಸರ್ಕಾರ ಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಅದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?
ಬಡವರ ಹೊರೆ ಕಡಿಮೆ ಮಾಡುವ ಬದಲು ಮತ್ತಷ್ಟು ಹೆಚ್ಚು ಮಾಡಲಾಗಿದೆ. ಪ್ರಧಾನಿ ಹಾಗೂ ಹಣಕಾಸು ಸಚಿವರು ಈ ಬಗ್ಗೆ ಮತ್ತೆ ಪರಿಶೀಲನೆ ಮಾಡಿ ವಸತಿ ಯೋಜನೆ ಗಳಿಗೆ ಜಿ ಎಸ್ ಟಿ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಬೇಕು. ಈ ಮೂಲಕ ಬಡವರ ಪರ ಕಾಳಜಿ ತೋರಬೇಕು ಎಂದು ಆಗ್ರಹಿಸಿದ್ದಾರೆ.





