ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ: ಸಿ ಟಿ ರವಿ

Date:

  • ‘ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ’
  • ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ನಾಲಿಗೆ ಹರಿಬಿಟ್ಟ ಸಿ ಟಿ ರವಿ 

ವಿಧಾನಸಭೆಯ ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ. ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿದ್ದಾರೆ.

ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು, “ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ” ಎಂದರು.

”ಸ್ಪೀಕರ್ ಯು ಟಿ ಖಾದರ್ ಅವರ ಘನತೆಯನ್ನು ಹಾಳು ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗುವುದು” ಎಂದು ಹರಿಗಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ ಅಶೋಕ್‌ ವಿಚಾರವಾಗಿ ಮಾತನಾಡಿದ ಅವರು, “ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲ ಟೀಕೆಗೆ ಉತ್ತರಿಸುತ್ತಾರೆ. ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಜೊತೆ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯೇಂದ್ರ ನೇಮಕಕ್ಕೆ ಬಿಜೆಪಿ ನಾಯಕರಲ್ಲೇ ತೀವ್ರ ಅಸಮಾಧಾನ: ಸಿದ್ದರಾಮಯ್ಯ

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿ, “ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ” ಎಂದು ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬಿ ವೈ ವಿಜಯೇಂದ್ರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, “ನಾನು ರೇಸ್​ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವು ತಂಡವಾಗಿ ಕೆಲಸ ಮಾಡುತ್ತೇವೆ, ಚರ್ಚೆ ಮಾಡಲು ಬಯಸಲ್ಲ” ಎಂದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನೀವು ಟಿಕೆಟ್ ಆಕಾಂಕ್ಷಿಯಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು 1994 ರ ನಂತರ ಯಾವುದೇ ಸ್ಥಾನ ಕೇಳಿ ಪಡೆದಿಲ್ಲ. ನಾನು ಆಕಾಂಕ್ಷಿಯಲ್ಲ, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಪಕ್ಷದ ಗೆಲುವಿಗೆ ಶಕ್ತಿಮೀರಿ ಶ್ರಮ ಹಾಕುತ್ತೇನೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...