‘ಚಲೋ ದಿಲ್ಲಿ’ ಪ್ರತಿಭಟನೆ : ಕರ್ನಾಟಕದ ಜೊತೆ ಕೈಜೋಡಿಸಲಿರುವ ಕೇರಳ, ತಮಿಳುನಾಡು, ತೆಲಂಗಾಣ

Date:

ತೆರಿಗೆ ನೀತಿಯ ಅನ್ಯಾಯದ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಫೆ.07ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಸಂಸದರು, ಶಾಸಕರು ಹಮ್ಮಿಕೊಳ್ಳುವ ‘ಚಲೋ ದಿಲ್ಲಿ’ ಪ್ರತಿಭಟನೆಗೆ ಕೇರಳ, ತಮಿಳುನಾಡು, ತೆಲಂಗಾಣದ ಜನಪ್ರತಿನಿಧಿಗಳು ಕೈಜೋಡಿಸಲಿದ್ದಾರೆ.

ಡಿಸಿಎಂ ಡಿ ಕೆ ಶಿವಕುಮಾರ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,” ಫೆ.7ರಂದು ರಾಜ್ಯದ ಎಲ್ಲ ಮಂತ್ರಿಗಳು, ಎರಡೂ ಸದನಗಳ ಶಾಸಕರು ಹಾಗೂ ಸಂಸದರು 14ನೇ ಹಣಕಾಸಿನ ಆಯೋಗದಿಂದ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ಕೇಂದ್ರದಿಂದ ಬರಬೇಕಿರುವ ಅನುದಾನ ಹಾಗೂ ಇತರ ಸಮಸ್ಯೆಗಳ ವಿರುದ್ಧವು ಪ್ರತಿಭಟನೆ ನಡೆಸಲಾಗುವುದು” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕದ ಜೊತೆ ಕೇರಳ, ತೆಲಂಗಾಣ ಹಾಗೂ ತಮಿಳುನಾಡಿನ ಜನಪ್ರತಿನಿಧಿಗಳು ಕೂಡ  ಕೈಜೋಡಿಸಿ ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಧನಿಯತ್ತಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

16ನೇ ಹಣಕಾಸು ಆಯೋಗ – ತೆರಿಗೆ ಹಂಚಿಕೆ ಮತ್ತು ಅನುದಾನ ಸೂತ್ರಗಳಿಗೆ ಬದಲಾವಣೆಗಳನ್ನು ಶಿಫಾರಸು ಮಾಡುವ ಏಕೈಕ ಸಂಸ್ಥೆಯಾಗಿದೆ.ಅಕ್ಟೋಬರ್ 2025 ರೊಳಗೆ ತನ್ನ ವರದಿಯನ್ನು ಸಲ್ಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆಯು ಪ್ರಾಮುಖ್ಯತೆಯನ್ನು ಪಡೆಯಲಿದೆ.

ಕೇಂದ್ರ ಸರ್ಕಾರ 14ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲಿನಲ್ಲಿ ತಾರತಮ್ಯ ಮಾಡಿದ ಪರಿಣಾಮ ರಾಜ್ಯಕ್ಕೆ ಶೇ.4.72 ರಿಂದ ಶೇ.3.64 ರಷ್ಟು ಇಳಿಕೆಯಾಗಿದೆ. ಇದರಿಂದ ಕರ್ನಾಟಕಕ್ಕೆ 62,098 ಕೋಟಿ ರೂ. ನಷ್ಟವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕೇರಳ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳು ಇದೇ ರೀತಿಯ ಆಕ್ಷೇಪಗಳನ್ನು ಮಾಡಿದ ಕಾರಣ ಕರ್ನಾಟಕ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯಗಳು ಸಾಲ ಪಡೆಯಬಹುದಾದ ಮೊತ್ತದ ಮೇಲೆ ಹೇರಿರುವ ಮಿತಿಯ ವಿರುದ್ಧ ಕೇರಳ ಈಗಾಗಲೇ ಸುಪ್ರೀಂ ಕೋರ್ಟ ಕದ ತಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...