ಚಿತ್ರದುರ್ಗ | ಹೂಳು ತುಂಬಿರುವ ಚರಂಡಿಗಳು; ಮೂಲ ಸೌಕರ್ಯಗಳ ಮರೀಚಿಕೆ

Date:

ಚರಂಡಿಗಳಲ್ಲಿ ಹೂಳು ತುಂಬಿಸಿದ್ದು, ಕೊಳಚೆ ನೀರು ಮನೆಗಳ ಸುತ್ತ ಹಾಗೂ ರಸ್ತೆಯ ಮೇಲೆ ಹರಿಯುತ್ತಿದೆ. ಮಿನಿ ಟ್ಯಾಂಕ್‌ನಿಂದ ನೀರು ಸೋರಿಕೆಯಾಗುತ್ತಿದೆ. ಆ ಟ್ಯಾಂಕ್‌ ಮೇಲೆ ಪಾಚಿ ಬೆಳೆದುಕೊಂಡಿದೆ. ಕೊಳಚೆ ಮತ್ತು ನೀರಿನಿಂದಾಗಿ ಪೊದೆ ಬೆಳೆದುಕೊಂಡು ಹಾವು, ಕ್ರಿಮಿಕೀಟಗಳ ಆವಾಸ ಸ್ಥಾನವಾಗಿದೆ. ಅಂಗನವಾಡಿ ಕಟ್ಟಡವೂ ಪೊದೆಗಳಿಂದ ಸುತ್ತುವರೆದಿದೆ – ಇದು ಗುಡ್ಡದ ರಂಗವನಹಳ್ಳಿಯಲ್ಲಿ ಕಂಡುಬರುವ ಸಾಮಾನ್ಯ ದೃಶ್ಯಗಳು.

ಚಿತ್ರದುರ್ಗದಿಂದ 5 ಕಿ.ಮೀ ದೂರದಲ್ಲಿರುವ ಗುಡ್ಡದ ರಂಗವನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಸುಮಾರು 150 ರಿಂದ 200 ಕುಟುಂಬಗಳು ವಾಸಮಾಡುತ್ತಿವೆ. ಈ ದಲಿತ ಕಾಲೋನಿಯಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ದಲಿತ ಕಾಲೋನಿಯಲ್ಲಿ ಕೆಲವು ಕಾಂಕ್ರಿಟ್ ರಸ್ತೆಗಳನ್ನು ನಿರ್ಮಿಸಿದ್ದರೂ, ಯಾವುದಾದರೂ ಒಂದು ಬದಿಯಲ್ಲಿ ಚರಂಡಿ ನಿರ್ಮಿಸಬೇಕಾಗಿತ್ತು. ಆದರೆ, ಇಲ್ಲಿ ಚರಂಡಿ ನಿರ್ಮಿಸದೆ ನೆಪ ಮಾತ್ರಕ್ಕೆ ಕೇವಲ ರಸ್ತೆಯನ್ನು ನಿರ್ಮಿಸಿದ್ದು ಮನೆಗಳಿಂದ ಹೊರಬರುವ ಚರಂಡಿ ನೀರು ರಸ್ತೆಯ ಮಧ್ಯದಲ್ಲಿ ರಸ್ತೆಯ ಮೇಲೆಲ್ಲಾ ಹರಿದಾಡುವಂತಿದೆ.

ಕೆಲವು ರಸ್ತೆಗಳ ಪಕ್ಕದಲ್ಲಿ ಚರಂಡಿ ನಿರ್ಮಿಸಿದ್ದು, ಆ ಚರಂಡಿಗಳಲ್ಲಿ ಹೂಳು ತೆಗೆಯದೆ ವರ್ಷಗಳೇ ಕಳೆದಿವೆ. ಹಾಗಾಗಿ ಚರಂಡಿಗಳು ತುಂಬಿ ಕಟ್ಟಿಕೊಂಡಿದ್ದು, ಚರಂಡಿಯ ನೀರು ರಸ್ತೆಯ ಮೇಲೆಲ್ಲಾ ಹರಿದು ಮಳೆ ಬಂದರೆ ರಸ್ತೆ ಮೇಲೆಲ್ಲಾ ಹರಿದು ಮನೆಯೊಳಕ್ಕೆ ನುಗ್ಗುವ ಪರಿಸ್ಥಿತಿ ಇದೆ. ಇದೇ ರಸ್ತೆಯ ಮೇಲೆ ಮಕ್ಕಳು ವೃದ್ಧರಾದಿಯಾಗಿ ಎಲ್ಲರೂ ತುಳಿದುಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕುಡಿಯುವ ನೀರಿನ ಟ್ಯಾಂಕ್

ಕೆಲ ಮನೆಗಳ ಮುಂದೆ ಚರಂಡಿಗಳನ್ನು ನಿರ್ಮಿಸದೆ ಬಿಟ್ಟಿದ್ದು, ಮನೆಗಳ ಮುಂದೆ ಚರಂಡಿಯ ಹೂಳೆತ್ತದೆ, ಕೊಳಚೆ ನೀರು ಗುಂಡಿಯಲ್ಲಿ ತುಂಬಿಕೊಂಡು ಕಾಲರಾ, ಮಲೇರಿಯಾ ಇನ್ನಿತರ ರೋಗಗಳನ್ನು ಆಹ್ವಾನಿಸುವಂತಿದೆ. ಚರಂಡಿಯ ನೀರು ಸರಾಗವಾಗಿ ಹೊರಗೆ ಹೋಗಲು ಮಾರ್ಗಗಳನ್ನು ನಿರ್ಮಿಸದೆ ಮನೆಗಳ ಪಕ್ಕದಲ್ಲಿ ಹೋಗಿದ್ದು ಹೆಚ್ಚು ಮಳೆ ಬಂದರೆ ಮನೆ ಅಂಗಳದಲ್ಲೆಲ್ಲ ಚರಂಡಿಯ ನೀರು ತುಂಬಿಕೊಳ್ಳುವ ಪರಿಸ್ಥಿತಿ ಕಾಲೋನಿಯಲ್ಲಿದೆ. ಹಾಗೆ ಇಲ್ಲಿ ಕೆಲವು ಕಡೆ ಕಾಂಕ್ರಿಟ್ ರಸ್ತೆ ಕೂಡ ನಿರ್ಮಾಣವಾಗಿಲ್ಲ.

ಕಾಲೋನಿಯಲ್ಲಿರುವ ಮಿನಿ ಟ್ಯಾಂಕನ್ನು ನೋಡಿದರೆ ನೀರು ತುಂಬಿಕೊಂಡು ಸೋರುತ್ತಿರುವ ಪೈಪ್‌ಗಳಿಗೆ ಗೋಣಿಚೀಲ ಸುತ್ತಿ ಬಿಟ್ಟಿರುವುದು ಕಂಡುಬಂದಿದ್ದು, ರಸ್ತೆಯಲ್ಲಿ ಮತ್ತು ಟ್ಯಾಂಕ್ ಮೇಲೆಲ್ಲಾ ನೀರು ಹರಿದು ಟ್ಯಾಂಕ್ ಹೊರ ಭಾಗದಲ್ಲಿ ಮತ್ತು ಟ್ಯಾಂಕಿಯ ಸುತ್ತಮುತ್ತ ಪಾಚಿ ಕಟ್ಟಿದೆ. ಟ್ಯಾಂಕ್ ಹೊರಭಾಗವೇ ಈ ರೀತಿ ಇದ್ದರೆ ಒಳಭಾಗದ ಪರಿಸ್ಥಿತಿ ಅವಲೋಕಿಸಬೇಕಾಗಿದೆ. ಈ ಟ್ಯಾಂಕನ್ನು ಸ್ವಚ್ಛಗೊಳಿಸದೆ ಎಷ್ಟು ಸಮಯವಾಗಿದೆಯೆಂದು ಸ್ಥಳೀಯ ಆಡಳಿತವೇ ಹೇಳಬೇಕು. ‌

ಗಟಾರು

ಟ್ಯಾಂಕ್‌ನ ಮುಂಭಾಗದಲ್ಲಿ ವಾಸವಿದ್ದ ವೃದ್ದೆಯೊಬ್ಬರನ್ನು ಈ ದಿನ.ಕಾಮ್‌ ಮಾತನಾಡಿಸಿದಾಗ, “ಅವರು ಈ ಟ್ಯಾಂಕ್‌ ತೊಳೆಯದೇ ಮೂರ್ನಾಲ್ಕು ವರ್ಷಗಳೇ ಕಳೆದಿವೆ. ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಕೇಳಿಕೊಂಡರೂ ಸ್ವಚ್ಛಗೊಳಿಸಿಲ್ಲ. ಅದೇ ನೀರನ್ನೇ ಕುಡಿಯಲು ಮತ್ತು ಬಳಸಲು ಇಲ್ಲಿ ನಾವೆಲ್ಲ ಉಪಯೋಗಿಸುತ್ತಿದ್ದೇವೆ. ನಮಗೆ ರೋಗ ಬಂದರೆ ಯಾರು ಜವಾಬ್ದಾರರು” ಎಂದು ಪ್ರಶ್ನಿಸಿದರು.

“ಇತ್ತೀಚೆಗೆ ನಿರ್ಮಾಣವಾದ ಅಂಗನವಾಡಿ ಕೇಂದ್ರ‌ದ ಬಳಿ ಈ ದಿನ.ಕಾಮ್ ಭೇಟಿ ನೀಡಿದಾಗ, ಕೇಂದ್ರದ ಸುತ್ತಮುತ್ತ ಗಿಡಗಂಟಿಗಳು ಬೆಳೆದಿರುವುದು ಕಂಡುಬಂದಿದೆ. ಅದರ ಪಕ್ಕದಲ್ಲಿಯೇ ಸ್ಥಳೀಯರು ಕಸ ಸುರಿದಿದ್ದು, ಅದನ್ನು ಸ್ವಚ್ಛಗೊಳಿಸದೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯತೆ ಮೆರೆದಿದೆ. ಭೇಟಿ ನೀಡಿದಾಗ ಪಕ್ಕದಲ್ಲಿದ್ದ ಗುಡಿಸಲೊಂದರಲ್ಲಿ ಕಲ್ಲುಪೊಟರೆಯಲ್ಲಿ ಒಂದು ಹಾವು ಸೇರಿಕೊಂಡಿದ್ದು, ಅಲ್ಲಿ ಹುಡುಗರು ಕೋಲು ಹಿಡಿದು ಓಡಿಸಲು ಅಥವಾ ಸಾಯಿಸಲು ಪ್ರಯತ್ನ ಪಡುತ್ತಿದ್ದುದು ಕಂಡುಬಂದಿತು. ಇಂತಹ ಸ್ಥಿತಿಯಲ್ಲಿ ಮಕ್ಕಳನ್ನು ಪಾಲಕರು ಯಾವ ಧೈರ್ಯದಿಂದ ಅಂಗನವಾಡಿಗೆ ಕಳುಹಿಸುತ್ತಾರೆ” ಎಂಬುದು ಪ್ರಶ್ನೆಯಾಗಿದೆ.

ಚರಂಡಿ

ಸ್ಥಳೀಯ ಯುವಕ ರಮೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಚರಂಡಿಗಳು ಹೂಳು ತುಂಬಿಕೊಂಡಿದ್ದು, ಮೂರ್ನಾಲ್ಕು ವರ್ಷ ಕಳೆದರೂ ಚರಂಡಿಯನ್ನು ಸ್ವಚ್ಛಗೊಳಿಸಿಲ್ಲ. ಬಹಳಷ್ಟು ಚರಂಡಿಗಳು ಹೂಳು ತುಂಬಿಕೊಂಡು ರಸ್ತೆ ಮೇಲೆಲ್ಲಾ ಚರಂಡಿಯ ನೀರು ಹರಿಯುತ್ತದೆ. ಕೊಳಚೆ ನೀರು ಮನೆಗಳ ಮುಂದೆ ನಿಂತು ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಚರಂಡಿಯ ಅಸ್ವಸ್ಥತೆ

“ಅಂಗನವಾಡಿ ಕೇಂದ್ರದ ಸುತ್ತಮುತ್ತ ಗಿಡಗಂಟಿಗಳಲ್ಲಿ ಕ್ರಿಮಿಕೀಟ ಮತ್ತು ಹಾವು ಚೇಳುಗಳಂತ ವಿಷ ಜಂತು, ಹುಳಗಳು ಸಾಮಾನ್ಯವಾಗಿ ಕಂಡುಬರುತ್ತಿವೆ. ಪೋಷಕರು ಮಕ್ಕಳನ್ನು ಆತಂಕದಿಂದ ಕಳುಹಿಸುವುದಕ್ಕೆ ಯೋಚನೆ ಮಾಡುತ್ತಿದ್ದಾರೆ. ಜೊತೆಗೆ ಪಕ್ಕದಲ್ಲಿಯೇ ಸ್ಥಳೀಯರು ಕಸ ಕಡ್ಡಿ, ತ್ಯಾಜ್ಯ ವಸ್ತುಗಳನ್ನು ಸುರಿದಿದ್ದಾರೆ. ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಮಕ್ಕಳಿಗೆ ಆಟದ ಮೈದಾನವನ್ನು ರೂಪಿಸುವಂತೆ ಮನವಿ ಮಾಡಿದರೂ ಸ್ಥಳೀಯ ಆಡಳಿತ ಗಣನೆಗೆ ತೆಗೆದುಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ಚಿತ್ರದುರ್ಗ | ದಲಿತರ ಬೀದಿಯಲ್ಲಿ ಮೂಲ ಸೌಕರ್ಯ ಮರೀಚಿಕೆ; ಜನಪ್ರತಿನಿಧಿಗಳ ನಿರ್ಲಕ್ಷ್ಯ

“ಅಂಬೇಡ್ಕರ್ ಭವನವನ್ನು ಇತ್ತೀಚೆಗೆ ನಿರ್ಮಿಸಿದ್ದಾರೆ. ಇದರ ಸುತ್ತಮುತ್ತಲೂ ಗಿಡಗಂಟಿಗಳು ಬೆಳೆದಿದ್ದು, ಉಪಯೋಗಿಸದ ಸ್ಥಿತಿಯಲ್ಲಿದೆ. ಸರ್ಕಾರದ ಕೆಲವು ಮೂಲ ಸೌಕರ್ಯಗಳಿದ್ದರೂ ಕೂಡ ಅದನ್ನು ಉಪಯೋಗಿಸಿದ ಸ್ಥಿತಿ ಕಾಲೋನಿಯಲ್ಲಿದೆ. ಈಗಲಾದರೂ ಸ್ಥಳೀಯ ಆಡಳಿತ ಮತ್ತು ಜಿಲ್ಲಾಡಳಿತ ಎಚ್ಚೆತ್ತು ಸ್ವಚ್ಛತೆಯನ್ನು ಕಾಪಾಡಿ ಜನರ ಆರೋಗ್ಯವನ್ನು ಕಾಪಾಡಬೇಕು” ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...