ಚಿತ್ತಾಪುರ ಪಥಸಂಚಲನಕ್ಕೆ ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ; ಇಂದು ಮಧ್ಯಾಹ್ನ ವಿಚಾರಣೆ

Date:

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ 5 ಸಂಘಟನೆಗಳೂ ಅಂದೇ ನಮಗೂ ಅವಕಾಶ ಕೊಡಿ ಎಂದು ಅರ್ಜಿ ಹಾಕಿದೆ. ಈ ಮಧ್ಯೆ ಎಲ್ಲ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ ಹೈಕೋರ್ಟ್‌ನಲ್ಲಿ ನಡೆಯಲಿದೆ.

ಆರ್‌ಎಸ್‌ಎಸ್‌ ಅಕ್ಟೋಬರ್ 19 ರಂದು ಪಥಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಆದರೆ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡಿಲ್ಲ ಮತ್ತು ಹಲವು ಸಂಘಟನೆಗಳು ಪಥಸಂಚಲನಕ್ಕೆ ಅನುಮತಿ ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್‌ ನಾಗಯ್ಯ ಹಿರೇಮಠ ಕಾನೂನು ಸುವ್ಯವಸ್ಥೆ ಕಾರಣ ನೀಡಿ ತಡೆ ನೀಡಿದ್ದರು.

ಅನುಮತಿ ನೀಡದ ಬೆನ್ನಲ್ಲೇ ಆರ್‌ಎಸ್‌ಎಸ್‌ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್‌ ಇಂದಿಗೆ ವಿಚಾರಣೆ ಮುಂದೂಡಿ ಅನುಮತಿ ನೀಡುವ ಬಗ್ಗೆ ಸರ್ಕಾರದ ಅಭಿಪ್ರಾಯವನ್ನು ಕೇಳಿತ್ತು. ವಿಚಾರಣೆಯ ಸಂದರ್ಭದಲ್ಲಿ ನ.2 ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ಆರ್‌ಎಸ್‌ಎಸ್‌ ಮನವಿ ಮಾಡಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಎಸ್‌ಎಸ್‌ ಅರ್ಜಿ ಸಲ್ಲಿಸುತ್ತಿದ್ದಂತೆ ಮತ್ತೊಂಡು ಕಡೆ ಭೀಮ್ ಆರ್ಮಿ, ದಲಿತ್ ಪ್ಯಾಂಥರ್ ಹಾಗೂ ಕುರುಬ ಸಮುದಾಯ ಅದೇ ದಿನ ಪ್ರತಿಭಟನೆಗೆ ಅರ್ಜಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಲಸಗಾರ ಕಂದಾಯ ಸಚಿವರು ಭಕ್ತರ ಕ್ಯೂ ಕಾಯಲು ನಿಲ್ಲುವುದು ತರವಲ್ಲ

ಇನ್ನೊಂದು ಕಡೆ ನವೆಂಬರ್ 2 ರಂದೇ ಕೇಂದ್ರ ಸರ್ಕಾರದ ವಿರುದ್ದ ಅತೀವೃಷ್ಟಿ ಪರಿಹಾರಕ್ಕಾಗಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಪಥಸಂಚಲನ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘಟನೆ ಹಸಿರು ಸೇನೆ ಬಣ ಅರ್ಜಿ ಹಾಕಿದೆ.

ಸಂಘಟನೆಗಳ ಮಾತ್ರವಲ್ಲದೇ ರಾಜ್ಯ ಕ್ರಿಶ್ಚಿಯನ್ ವೆಲ್ಫೇರ್‌ ಸೊಸೈಟಿ ಸಹ ನಾವು ಪ್ರಾರ್ಥನಾ ನಡಿಗೆ ಮಾಡುತ್ತೇವೆ ಎಂದು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರ ನಾವು ಸಹಜವಾಗಿಯೇ ಪ್ರಾರ್ಥನೆ ಮಾಡುತ್ತೇವೆ. ನಾವು ಆರ್‌ಎಸ್‌ಎಸ್‌ ವಿರುದ್ಧವಾಗಿ ಈ ನಡಿಗೆ ಮಾಡುತ್ತಿಲ್ಲ. ಬದಲಾಗಿ ಶಾಂತಿ ಸುವ್ಯಸಸ್ಥೆಯ ಬಗ್ಗೆ ಅರಿವು ಮೂಡಿಸುತ್ತೇವೆ ಎಂದು ಹೇಳಿದೆ.

ಈ ಎಲ್ಲ ಅರ್ಜಿಗಳ ವಿಚಾರಣೆ ಇಂದು ನ್ಯಾಯಾಲಯದ ಮುಂದೆ ಬರುತ್ತಿವೆ. ಹೀಗಾಗಿ ಎಲ್ಲರ ಚಿತ್ತ ಇಂದು ಮಧ್ಯಾಹ್ನ 3:30ರ ಕೋರ್ಟ್ ಕಲಾಪದತ್ತ ನೆಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...