ಬೀದರ್ | ಕಟ್ಟಡ ನಿರ್ಮಾಣ ಕಾರ್ಮಿಕರ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಸಿಐಟಿಯು ಒತ್ತಾಯ

Date:

  • ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ.
  • ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಹುಮನಾಬಾದ್ ತಾಲೂಕು ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹುಮನಾಬಾದ್ ಪಟ್ಟಣದ ಕಾರ್ಮಿಕ ನಿರೀಕ್ಷಕರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಮುಖರು “ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಕಾನೂನು ಪ್ರಕಾರ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ. 2012-23ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಈವರೆಗೂ ಸಹಾಯಧನ ಬಿಡುಗಡೆ ಮಾಡಿಲ್ಲ. 2021-22ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು ಒಂದೂವರೆ ಲಕ್ಷ ಜನ ಫಲಾನುಭವಿಗಳಿಗೆ ಸಹಾಯಧನ ಬಾಕಿ ಉಳಿಸಿಕೊಳ್ಳಲಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ, ಆರ್ಥಿಕ ವರ್ಷ ಕಳೆಯುತ್ತಿದ್ದರೂ ಈವರೆಗೂ ಸಹಾಯಧನಕ್ಕಾಗಿ ಅರ್ಜಿಯನ್ನೇ ಆಹ್ವಾನಿಸಿಲ್ಲ. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ರಾಜ್ಯಾದ್ಯಂತ ಎಲ್ಲ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಹಕ್ಕೊತ್ತಾಯ ಸಲ್ಲಿಸುತ್ತಿದ್ದೇವೆ” ಎಂದರು.

“ಇದೀಗ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ‘ಹಣದ ಕೊರತೆ ಇದೆ” ಎಂದು ಹೇಳಲಾಗುತ್ತಿದೆ. ಹಣವಿಲ್ಲ ಎನ್ನುವಾಗಲೇ, ಈ ಹಿಂದೆಯೂ ‘ಟ್ಯಾಬ್, ಲ್ಯಾಪ್ ಟಾಪ್ ಮತ್ತು ಸ್ಕೂಲ್ ಕಿಟ್ ಗಳನ್ನು ಖರೀದಿ, ನೀಡಲಾಗಿತ್ತು. ಈಗಲೂ ಪ್ರತಿ ಲ್ಯಾ‌ಪ್ ಟಾಪ್ ಗೆ 21 ಸಾವಿರ ರೂಪಾಯಿಯಂತೆ, 10 ಸಾವಿರ ಲ್ಯಾಪ್‌ಟಾಪ್‌ಗಳನ್ನು ಖರೀದಿಸಲಾಗಿದೆ, ಅಂದರೆ ನೇರ ಹಣ ವರ್ಗಾವಣೆಗೆ ಹಣವಿಲ್ಲ, ಆದರೆ ಖರೀದಿಗೆ ಹಣವಿದೆಯೇ? ಎಂಬುದು ಕಾರ್ಮಿಕರ ಪ್ರಶ್ನೆಯಾಗಿದೆ” ಎಂದರು.

ಕೂಡಲೇ ಕಾರ್ಮಿಕ ಸಚಿವರು ಹಾಗೂ ಕಲ್ಯಾಣ ಮಂಡಳಿ ನಮ್ಮ ಬೇಡಿಕೆಗಳು ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಬಸವರಾಜ ಮಾಳಗೆ, ಹುಮನಾಬಾದ್ ತಾಲೂಕು ಅಧ್ಯಕ್ಷ ಗೌಸೋದ್ದೀನ್, ಕಾರ್ಯದರ್ಶಿ ಶಶಿಕಾಂತ ಡಾಂಗೆ, ಉಪಾಧ್ಯಕ್ಷ ಈಶ್ವರ ಕ್ರಾಂತಿ, ಸೇರಿದಂತೆ ಪ್ರಮುಖರಾದ ರೇಷ್ಮಾ ಹಂಸರಾಜ್ , ಕಿರಣಕುಮಾರ, ನಬೀಸಾಬ್ ಸೇರಿದಂತೆ ಇತರರಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭ್ರಷ್ಟಾಚಾರ ಆರೋಪ; ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಬೇಡಿಕೆಗಳು:

1. 2022-23ನೇ ಸಾಲಿನ ಶೈಕ್ಷಣಿಕ ಸಹಾಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.

2. 2021-22 ನೇ ಸಾಲಿನ ಲಕ್ಷ ಫಲಾನುಭವಿಗಳಿಗೆ ಬಾಕಿ ಉಳಿಸಿಕೊಂಡಿರುವ ಶೈಕ್ಷಣಿಕ ಸಹಾಧನವನ್ನು ಪಾವತಿಸಬೇಕು.

3. 2023-23ನೇ ಸಾಲಿನ ಶೈಕ್ಷಣಿಕ ವರ್ಷದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಬೇಕು.

4. ಲ್ಯಾಪ್‌ ಟಾಪ್‌, ಟ್ಯಾಬ್‌ ಸೇರಿದಂತೆ ಯಾವುದೇ ವಿಧವಾದ ಖರೀದಿಗಳನ್ನು ನಿಲ್ಲಿಸಬೇಕು.

5. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಖರೀದಿ ವ್ಯವಹಾರಗಳನ್ನು ತನಿಖೆಗೆ ಆದೇಶಿಸಬೇಕು.

6. ಭ್ರಷ್ಟಾಚಾರದಲ್ಲಿ ಭಾಘಿಯಾದವರ ಮೇಲೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...