ಕೇಂದ್ರದ ಅನುದಾನ ತಾರತಮ್ಯ ಚರ್ಚಿಸಲು ಸಿಎಂ, ಡಿಸಿಎಂ ದೆಹಲಿಗೆ: ರಣದೀಪ್ ಸಿಂಗ್ ಸುರ್ಜೇವಾಲಾ

Date:

ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡುತ್ತಾರೆ ಎನ್ನುವುದು ಕೇವಲ ಊಹಾಪೋಹ. ಯಾವುದೇ ತರಹದ ನಾಯಕತ್ವದ ಬಗ್ಗೆ ಚರ್ಚೆ ಮಾಡುವ ಸಭೆ ನಿಗದಿಯಾಗಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿ, “ಕೇಂದ್ರದ ಅನುದಾನ ತಾರತಮ್ಯದ ಗಮನ ಸೆಳೆಯಲು ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದಾರೆ. ಕಳಸಾ ಬಂಡೂರಿಗೆ ಕೇಂದ್ರ ಅನುಮತಿ ನೀಡಿಲ್ಲ. ಮೇಕೆದಾಟು ಯೋಜನೆಯನ್ನು ಹಿಡಿದಿಟ್ಟುಕೊಂಡಿದೆ. ಜಿಎಸ್​​​ಟಿ ಪರಿಹಾರವನ್ನು ತಡೆಹಿಡಿಯಲಾಗಿದೆ. ಈ ಬಗ್ಗೆ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ” ಎಂದು ತಿಳಿಸಿದರು.

”ಸಂಪತ್ತಿನ ಅಸಮತೋಲನ ಹೆಚ್ಚಾಗಿದೆ. ಇದರ ಬಗ್ಗೆ ಎಲ್ಲಿಯೂ ಚರ್ಚೆಯಾಗುತ್ತಿಲ್ಲ. ಹಮೀರ್ ಔರ್ ಹಮೀರ್, ದಹೀರ್ ಔರ್ ದಹೀರ್ ಸ್ಥಿತಿ ಇದೆ. ಬಡವರು ಬಡವರಾಗುತ್ತಿದ್ದಾರೆ, ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ದೇಶದ ಕ್ಯಾಪಿಟಲ್ ಆದಾಯ ಇಳಿಕೆಯಾಗುತ್ತಿದೆ. ಕಾಂಬೋಡಿಯಾ, ಕೀನ್ಯಾ, ಬಾಂಗ್ಲಾದೇಶಕ್ಕಿಂತ ಭಾರತ ಹಿಂದಿದೆ. ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 146 ದೇಶಗಳ ರ‍್ಯಾಂಕ್​​ನಲ್ಲಿ ಕೆಳಗಿಳಿದಿದ್ದೇವೆ. ಟೆಕ್ಸ್ ಟೈಲ್ ಆದಾಯ ಶೇ.30ರಷ್ಟು ಕಡಿತಗೊಂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ”ಐಎನ್​ಟಿಯುಸಿ, ಟ್ರೇಡ್ ಯೂನಿಯನ್ ಇಂದು ಭಾರತ ಬಂದ್​ಗೆ ಕರೆ ನೀಡಿವೆ. ಭಾರತ ಬಂದ್ ಕರೆದಿರುವ ಉದ್ದೇಶ ಕೇಂದ್ರದ ಮೋದಿಯವರ ನಡೆ. ದೇಶದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. 30 ಲಕ್ಷ ಉದ್ಯೋಗಗಳು ಕೇಂದ್ರದಲ್ಲಿ ಖಾಲಿ ಇದೆ. 2.50 ಲಕ್ಷ ರೈಲ್ವೆ ಉದ್ಯೋಗ, ಆರ್ಮಿ, ನೇವಿ, ಏರ್ ಪೋರ್ಸ್​​​ನಲ್ಲಿ 1 ಲಕ್ಷ ಹುದ್ದೆ, ವಿವಿಧ ಪೊಲೀಸ್ ಪೋರ್ಸ್​​ನಲ್ಲಿ 80 ಸಾವಿರ ಹುದ್ದೆ ಖಾಲಿ ಇದೆ. ಸಿಆರ್​​ಪಿಎಫ್, ಬಿಎಸ್ಎಫ್ ನೇಮಕಾತಿ ಪೆಂಡಿಂಗ್ ಇದೆ. ನಿರುದ್ಯೋಗದ ಪ್ರಮಾಣ ಶೇ. 30ಕ್ಕಿಂತ ಹೆಚ್ಚಿದೆ. ಶೇ. 10ರಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ನರೇಗಾ ಕಾರ್ಮಿಕರು ಕೇಂದ್ರದಿಂದ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಮನರೇಗಾ ಅನುದಾನ ನಿಂತಲ್ಲೇ ನಿಂತಿದೆ” ಎಂದು ಟೀಕಿಸಿದರು.

”ತಿರುಪುರ್, ಪಾಟಿಯಾಲಾ, ಸೂರತ್​​ನಲ್ಲಿ ಉದ್ಯಮ ಕುಸಿದಿದೆ. ಶೇ. 80ರಷ್ಟು ಅಸಂಘಟಿತ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರಿಗೂ ಅಲ್ಲಿ ತೊಂದರೆಯಾಗಿದೆ. ಗುತ್ತಿಗೆ ಆಧಾರದ ಕೆಲಸ ಹೆಚ್ಚಾಗುತ್ತಿದೆ. ಇದನ್ನೆಲ್ಲ ಮುಂದಿಟ್ಟುಕೊಂಡೇ ಸಂಘಟನೆಗಳು ಬೀದಿಗಿಳಿದಿವೆ. ಸಣ್ಣ ಸಣ್ಣ ಉದ್ಯೋಗ ಬಂದ್ ಆಗಿವೆ. ಸರ್ಕಾರಿ ಉದ್ಯೋಗಗಳನ್ನು ಭರ್ತಿ‌ ಮಾಡುತ್ತಿಲ್ಲ. ಇದಕ್ಕೆಲ್ಲ ಮೋದಿಯವರ ನಡೆಯೇ ಕಾರಣ. ಭಾರತ ಬಡತನದತ್ತ ಸಾಗುತ್ತಿದೆ. ಜೀವನ ಮಟ್ಟದಲ್ಲಿ ದೇಶ ಕುಸಿಯುತ್ತಿದೆ. ಉದ್ಯೋಗ ನೀಡುವುದರಲ್ಲೂ ಕುಸಿತವಾಗಿದೆ. 50 ಲಕ್ಷ ಕಾರ್ಮಿಕರು ಬೀದಿಗಿಳಿದಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...