ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ಕಲ್ಯಾಣ ಕರ್ನಾಟಕ ಭಾಗವು (ಹೈದರಾಬಾದ್‌ ಕರ್ನಾಟಕ) ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಹೊಂದಿ, ಭಾರತಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಕಲ್ಯಾಣ ಕರ್ನಾಟಕ ಉತ್ಸವ’ಕ್ಕೆಚಾಲನೆ ನೀಡಿದರು.

ಬಳಿಕದ ಮಾತನಾಡಿದ ಸಿದ್ದರಾಮಯ್ಯ, “1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ‍್ಯ ಪಡೆದ ಸಂಭ್ರಮದಲ್ಲಿದ್ದರೆ ಈ ಭಾಗಕ್ಕೆ ಸ್ವಾತಂತ್ರ‍್ಯ ದೊರೆತಿರಲಿಲ್ಲ. ರಜಾಕಾರರ ದೌರ್ಜನ್ಯ ಮಿತಿ ಮೀರಿತ್ತು. ತ್ಯಾಗ ಬಲಿದಾನಗಳಿಗೆ ಹೆಸರುವಾಸಿಯಾದ ಈ ನೆಲದ ಅಪ್ರತಿಮ ಹೋರಾಟಗಾರರ ಛಲ ಮತ್ತು ಜವಾಹರ್ ಲಾಲ್ ನೆಹರೂ ಮತ್ತು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೃಢ ನಿಶ್ಚಯದಿಂದಾಗಿ ಒಕ್ಕೂಟ ವ್ಯವಸ್ಥೆಗೆ ಸೇರುವಂತಾಯಿತು” ಎಂದು ಹೇಳಿದರು.

“ಸ್ವಾತಂತ್ರ‍್ಯ ಹೋರಾಟದ ಜೊತೆಗೆ ಹೈದ್ರಾಬಾದ್ ಕರ್ನಾಟಕ ವಿಮೋಚನೆಗಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗವನ್ನು ಭಾರತದಲ್ಲಿ ವಿಲೀನಗೊಳಿಸಲು ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ಶರಣಗೌಡ ಇನಾಂದಾರ, ರಾಜಾ ವೆಂಕಟಪ್ಪ ನಾಯಕ, ದತ್ತಾತ್ರೇಯ ಅವರಾದಿ, ಶಿವಮೂರ್ತಿಸ್ವಾಮಿ ಅಳವಂಡಿ, ಮಟಮಾರಿ ನಾಗಪ್ಪ, ನಾರಾಯಣರಾವ್ ಕನಿಹಾಳ, ಹಕೀಕತ್‌ರಾವ್ ಚಿಟಗುಪ್ಪಕರ, ಚಂದ್ರಶೇಖರ್ ಪಾಟೀಲ್, ರಾಮಾಚಾರ್, ಡಾ. ಚರ್ಚಿಹಾಳ್ ಮಠ, ರಾಮಚಂದ್ರ ವೀರಪ್ಪ, ಕಪತಪ್ಪ ಬೇಳೆ, ಎ.ವಿ.ಪಾಟೀಲ್, ಆರ್.ವಿ. ಬಿಡ್ಡಪ್ಪ, ಅಮರ್ ಸಿಂಗ್ ರಾಠೋಡ್ ಮುಂತಾದ ಎಲ್ಲ ಹೋರಾಟಗಾರರ ತ್ಯಾಗ ಬಲಿದಾನ ಅವಿಸ್ಮರಣೀಯ. ಇಂತಹ ಅಸಂಖ್ಯಾತ ಹೋರಾಟಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರ ನೇತೃತ್ವದ ಶರಣರ ಚಳುವಳಿಯು ಇದೇ ಪುಣ್ಯಭೂಮಿಯಲ್ಲಿ ನಡೆದಿತ್ತು ಎಂಬುದು ಇಡೀ ಜಗತ್ತು ಹೆಮ್ಮೆ ಪಡುವ ಸಂಗತಿಯಾಗಿದೆ. ಉದಾತ್ತ ಪರಂಪರೆಗೆ ನಾಂದಿ ಹಾಡಿದ್ದ ಅಸಂಖ್ಯಾತ ಅನುಭಾವಿಗಳು, ಅವಧೂತರು, ಆರೂಢರು, ಸೂಫಿಸಂತರ ಕರ್ಮಭೂಮಿ ಇದು” ಎಂದು ಬಣ್ಣಿಸಿದರು.

“ಹಿಂದುಳಿದಿದ್ದ ಈ ಭಾಗವನ್ನು ಅಭಿವೃದ್ಧಿ ಮಾಡಬೇಕೆಂಬ ಉದ್ದೇಶದಿಂದ ಸನ್ಮಾನ್ಯ ದಿವಂಗತ ಡಾ. ಧರ್ಮಸಿಂಗ್‌ರವರ ನೇತೃತ್ವದ ಸಮಿತಿಯ ವರದಿ ಆಧರಿಸಿ, 1990ರಲ್ಲಿ ಹೈದ್ರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು. ಅಭಿವೃದ್ಧಿ ಸಾಧ್ಯವಾಗಬೇಕಾದರೆ ವಿಶೇಷ ಸ್ಥಾನಮಾನದ ಅಗತ್ಯವಿದೆಯೆಂದು ಈ ಭಾಗದ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸಿದ್ದರು. ಕೇಂದ್ರದ ಅಟಲ್ ಬಿಹಾರಿ ವಾಜಪೇಯಿಯವರ ನೇತೃತ್ವದ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ ನೀಡಬೇಕಾದ ವಿಶೇಷ ಸ್ಥಾನಮಾನವನ್ನು ಕೊಡಲಾಗುವುದಿಲ್ಲವೆಂದು ಬಹುಕಾಲದ ಜನರ ಬೇಡಿಕೆಯನ್ನು ತಿರಸ್ಕರಿಸಿತ್ತು. ಆದರೆ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸದೆ ದೇಶದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನರಿತ ಡಾ. ಮನಮೋಹನ್ ಸಿಂಗ್‌ರವರ ನೇತೃತ್ವದ ಯು.ಪಿ.ಎ. ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಟಿಕಲ್ 371ಜೆ ಅನ್ನು ದಿನಾಂಕ 1-1-2013 ರಿಂದ ಜಾರಿಗೆ ಬರುವಂತೆ ಅಧಿಸೂಚನೆಗಳನ್ನು ಹೊರಡಿಸಿತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

“ವಿಶೇಷ ಸ್ಥಾನಮಾನಕ್ಕಾಗಿ ನಡೆದ ಹೋರಾಟಗಳ ಮುಖಂಡತ್ವ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರ್ಮಸಿಂಗ್ ರವರು ಮುಂತಾದ ಅನೇಕ ಮಹನೀಯರ ಹೋರಾಟವನ್ನು ನಾವು ಮರೆಯಬಾರದು. ಹೋರಾಟದಿಂದ ತಕ್ಷಣಕ್ಕೆ ಸಿಕ್ಕ ಫಲ ನಮ್ಮ ಕಣ್ಣ ಮುಂದಿದೆ. 2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದ ನಂತರ ಇದುವರೆಗೆ ವಿವಿಧ ಇಲಾಖೆಗಳಲ್ಲಿ 1,19,923 ಹುದ್ದೆಗಳನ್ನು ನೇರ ನೇಮಕಾತಿಗೆ ಗುರುತಿಸಿದ್ದು, 84,620 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇದೀಗ ಒಳ ಮೀಸಲಾತಿ ವಿಚಾರವನ್ನು ಬಗೆಹರಿಸಿರುವುದರಿಂದ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಉದ್ದೇಶಿಸಿದ್ದೇವೆ” ಎಂದು ಭರವಸೆ ನೀಡಿದರು.

“ಕೆಕೆಆರ್‌ಡಿಬಿಗೆ 2013-14ನೇ ಸಾಲಿನಿಂದ 2025-26ನೇ ಸಾಲಿನವರೆಗೆ ಸರ್ಕಾರದಿಂದ 24,780 ಕೋಟಿ ರೂ.ಗಳಷ್ಟು ಅನುದಾನ ಹಂಚಿಕೆಯಾಗಿದೆ. ಇದುವರೆಗೆ 14,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನ ವೆಚ್ಚ ಮಾಡಲಾಗಿದೆ. 41,103 ಕಾಮಗಾರಿಗಳು ಕೈಗೆತ್ತಿಕೊಂಡಿದ್ದು, 32,985 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, 8,118 ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ. ಕೆ.ಕೆ.ಆರ್.ಡಿ.ಬಿ.ಗೆ ಪ್ರಸಕ್ತ 2025-26ನೇ ಸಾಲಿಗೆ 5,000 ಕೋಟಿ ರೂಪಾಯಿಗಳನ್ನು ಒದಗಿಸಿ, ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ. ಡಾ. ಅಜಯ್ ಧರ್ಮಸಿಂಗ್ ಅವರ ಅಧ್ಯಕ್ಷತೆಯ ಮಂಡಳಿಯು ಸಿದ್ಧಪಡಿಸಿದ್ದ ಕ್ರಿಯಾಯೋಜನೆಗೆ ಅನುಮೋದನೆ ದೊರೆತಿದ್ದು, ಕಾಮಾಗಾರಿಗಳು ಆರಂಭವಾಗುತ್ತಿವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...