ಸ್ಮಾರಕಗಳ ರಕ್ಷಣೆಯಿಂದ ಮುಂದಿನ ಪೀಳಿಗೆಗೆ ಇತಿಹಾಸ, ಪರಂಪರೆ ದಾಟಿಸಬಹುದು: ಸಿದ್ದರಾಮಯ್ಯ

Date:

  • ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎಂಬ ಮಾತು ಮರೆಯಬಾರದು
  • ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ

ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎನ್ನುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು. ನಮ್ಮ ಇತಿಹಾಸ, ಪರಂಪರೆಯನ್ನು ಈಗಿನ ಪೀಳಿಗೆಗೆ ಅರ್ಥ ಮಾಡಿಸಲು, ಮುಂದಿನ ತಲೆಮಾರುಗಳಿಗೆ ನಮ್ಮತನದ ಮಹತ್ವ ಸಾರಲು ಸ್ಮಾರಕಗಳ ರಕ್ಷಣೆ ಅತ್ಯಗತ್ಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಪ್ರವಾಸೋದ್ಯಮ ಮತ್ತು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ “ನಮ್ಮ ಸ್ಮಾರಕ: ನಮ್ಮ ಪರಂಪರೆ, ನಮ್ಮ ಗುರುತು, ನಮ್ಮ ಹೆಮ್ಮೆ” ಅಭಿಯಾನದ ಸಂವಾದ ಮತ್ತು ಡಿಜಿಟಲ್ ವೇದಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ನಾಡಿನ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಸ್ಮಾರಕಗಳ ರಕ್ಷಣೆಗೆ ಸರ್ಕಾರದ ಜತೆಗೆ ಸಾರ್ವಜನಿಕರು ಕೈ ಜೋಡಿಸಿದರೆ, ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆಸಲು ಸಾಕಷ್ಟು ಅವಕಾಶಗಳಿವೆ. ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸಿ ಕೇಂದ್ರಗಳಿಗೆ, ದೇವಾಲಯಗಳಿಗೆ ಬಡವರೂ ಹೋಗಲು ಅವಕಾಶ ಕಲ್ಪಿಸಬೇಕು ಎನ್ನುವ ಕಾಳಜಿ “ಶಕ್ತಿ” ಯೋಜನೆಯ ಹಿಂದಿದೆ. 60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆದು ದೇವಸ್ಥಾನಗಳ ಆದಾಯ ಹೆಚ್ಚಾಗಿದೆ. ಆರ್ಥಿಕತೆಗೆ ಚೈತನ್ಯ ಬಂದು ವ್ಯಾಪಾರ, ವಹಿವಾಟು ಹೆಚ್ಚಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಶಕ್ತಿ ಯೋಜನೆ ಹಿಂದೆ ಇಷ್ಟೆಲ್ಲಾ ಕಾಳಜಿಗಳು ಕೆಲಸ ಮಾಡಿವೆ. ಕೇವಲ ಚುನಾವಣೆ ಕಾರಣಕ್ಕೆ ಮಾಡಿದ್ದಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಪೌರಕಾರ್ಮಿಕರು ಪರಮಶೋಷಿತರು; ಸರ್ಕಾರ, ನಾವು-ನೀವು, ಎಲ್ಲರೂ ಕಾರಣ

ವಿಶ್ವ ಪರಂಪರೆ ತಾಣವೆಂದು ಘೋಷಿಸಲಾದ ಹೊಯ್ಸಳರ ವಾಸ್ತುಶಿಲ್ಪಿಯ ಸಮಗ್ರ ಭಾಗಗಳನ್ನು ಇನ್ ಟ್ಯಾಕ್ ಸಂಸ್ಥೆ ವತಿಯಿಂದ ಪ್ರಸ್ತುತ ಪಡಿಸಲಾಯಿತು. ಬ್ರಿಗೇಡ್ ಸಂಸ್ಥೆಯೊಂದಿಗೆ ವೆಂಕಟಪ್ಪ ಚಿತ್ರಶಾಲೆಯ ನವೀಕರಣ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಕಲ್ಕಿ ಸಂಸ್ಥೆಗೆ ಯೋಜನಾ ನಿರ್ವಹಣೆ ಘಟಕದ ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ, ಸಂರಕ್ಷಣಾ ಸ್ಮಾರಕಗಳ ಯೋಜನೆಗೆ ಒಳಪಡಲು ಆಸಕ್ತಿ ವ್ಯಕ್ತಪಡಿಸಿದ ಸಂಸ್ಥೆಗಳಿಗೆ ಆಶಯಪತ್ರ ವಿತರಿಸಲಾಯಿತು.

ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಸ್ಟಾರ್ಟ್ ಅಪ್ ವಿಜನ್ ಗ್ರೂಪ್ ಮತ್ತು ಕಲ್ಕಿ ಫೌಂಡೇಶನ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಲಾಖೆ ನಿರ್ದೇಶಕರಾದ ವಿ.ರಾಮ್ ಪ್ರಸಾತ್ ಮನೋಹರ್, ಇಲಾಖೆಯ ಆಯುಕ್ತರಾದ ಎ.ದೇವರಾಜು ಸೇರಿ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...