ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಿಎಂ ಸಿದ್ದರಾಮಯ್ಯ

Date:

  • ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ: ಸಿಎಂ
  • ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

“9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು. ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ” ಎಂದರು.

“ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು” ಎಂದು ಏಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಆಹಾರ ಸಚಿವರಾದ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...