ಜೈಲಿನಲ್ಲಿ ಸಾವನ್ನಪ್ಪಿದ ಖೈದಿಗಳ ಕುಟುಂಬಕ್ಕೆ ಪರಿಹಾರ; ಹೈಕೋರ್ಟ್‌ಗೆ ಸರ್ಕಾರ ಹೇಳಿಕೆ

Date:

2012ರಿಂದ ರಾಜ್ಯದಲ್ಲಿನ ಕಾರಾಗೃಹಗಳಲ್ಲಿ ಅಸಹಜವಾಗಿ ಸಾವನ್ನಪ್ಪಿದ ಮೃತ ಖೈದಿಗಳ ಸಂಬಂಧಿಕರಿಗೆ ಪರಿಹಾರವನ್ನು ಪಾವತಿಸಲು ನೀತಿಯನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಕೈದಿಗಳ ನಡುವಿನ ಜಗಳದಿಂದ ಮರಣ ಹೊಂದಿದಲ್ಲಿ ಮೃತ ಖೈದಿಯ ಕುಟುಂಬಕ್ಕೆ ₹7.50 ಲಕ್ಷ ಮತ್ತು ಆತ್ಮಹತ್ಯೆ ಸೇರಿದಂತೆ ಜೈಲಿನಲ್ಲಿ ಯಾವುದೇ ಅಸಹಜ ಸಾವು ಸಂಭವಿಸಿದಲ್ಲಿ ₹5 ಲಕ್ಷ ಪರಿಹಾರ ನೀಡಬೇಕು. ಜನವರಿ 1, 2012 ರಿಂದ ರಾಜ್ಯದಾದ್ಯಂತ ಕಾರಾಗೃಹಗಳಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದ ಕೈದಿಗಳಿಗೆ ಈ ನೀತಿಯು ಅನ್ವಯಿಸುತ್ತದೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಲೇವಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೈಲಿನಿಂದ ತಪ್ಪಿಸಿಕೊಳ್ಳುವಾಗ ಅಥವಾ ಪೆರೋಲ್‌ನಲ್ಲಿರುವಾಗ ಅಥವಾ ಜೈಲಿನ ಹೊರಗೆ ಕಾನೂನುಬದ್ಧ ಬಂಧನದಿಂದ ಸಾವು ಸಂಭವಿಸಿದರೆ, ಅನಾರೋಗ್ಯ ಸೇರಿದಂತೆ ಸಹಜ ಸಾವಿನ ಪ್ರಕರಣ ಹಾಗೂ ಯಾವುದೇ ನೈಸರ್ಗಿಕ ವಿಕೋಪದಿಂದ ಸಾವು ಸಂಭವಿಸಿದರೆ ಪರಿಹಾರ ನೀಡಲಾಗುವುದಿಲ್ಲ ಎಂದು ಹೇಳಿದೆ.

ಜೈಲಿನಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ಖೈದಿಗಳನ್ನು ಗುರುತಿಸಲು ರಾಜ್ಯ ಸರ್ಕಾರವು ಯೋಜನೆಯನ್ನು ರೂಪಿಸಿದೆ. 2017 ರಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಸ್ವಯಂ ಪ್ರೇರಿತ ಪಿಐಎಲ್ ಅನ್ನು ದಾಖಲಿಸಿದ್ದ ಹೈಕೋರ್ಟ್ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನಗಳ ಮೇಲೆ ನೀತಿಯನ್ನು ರೂಪಿಸಿದೆ. 2012ರಿಂದ ಮೃತ ಖೈದಿಗಳ ಮುಂದಿನ ಸಂಬಂಧಿಕರನ್ನು ಗುರುತಿಸಿ ಮತ್ತು ಅವರಿಗೆ ಸಮಂಜಸವಾದ ಪರಿಹಾರವನ್ನು ಪಾವತಿಸಬೇಕು ಎಂದು ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅಕ್ಟೋಬರ್ 2022ರಲ್ಲಿ ರೂಪಿಸಿದ ನೀತಿಯನ್ನು ಗಮನಿಸಿ, ಅರ್ಜಿಯಲ್ಲಿ ಎದ್ದಿರುವ ಕುಂದುಕೊರತೆಗಳನ್ನು ಸರ್ಕಾರವು ಸೂಕ್ತವಾಗಿ ಪರಿಹರಿಸಿದೆ ಎಂಬುದನ್ನು ಗಮನಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಜನವರಿ 1, 2012 ರಿಂದ ಕರ್ನಾಟಕದ ಕಾರಾಗೃಹಗಳಲ್ಲಿ ಅಸ್ವಾಭಾವಿಕ ಮರಣಕ್ಕೆ ಒಳಗಾದ ಖೈದಿಗಳ ಮುಂದಿನ ಸಂಬಂಧಿಕರಿಗೆ, ಮೃತ ಕೈದಿಯ ಮುಂದಿನ ಸಂಬಂಧಿಕರು ವಾಸಿಸುವ ಜಿಲ್ಲೆಗಳ ಉಪ ಆಯುಕ್ತರ ಮೂಲಕ ಪರಿಹಾರವನ್ನು ಪಾವತಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ 100 ಕಡೆ ಏಕಕಾಲದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ

ಜೈಲುಗಳ ಮುಖ್ಯಸ್ಥರು ಖೈದಿಯ ಅಸಹಜ ಸಾವಿನ ವರದಿಯನ್ನು ಪೊಲೀಸ್ ಮಹಾನಿರ್ದೇಶಕರು, ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಜೊತೆಗೆ ಮ್ಯಾಜಿಸ್ಟ್ರೇಟ್ ವಿಚಾರಣೆಯ ವರದಿ, ಮರಣೋತ್ತರ ಪರೀಕ್ಷೆ, ಸಾವಿನ ಅಂತಿಮ ಕಾರಣ, ವೈದ್ಯಕೀಯ ಇತಿಹಾಸ ಮತ್ತು ನೀಡಿದ ಚಿಕಿತ್ಸೆಗಳ ವರದಿಯನ್ನು ಸಲ್ಲಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...