ಬಾಣಂತಿಯರ & ಶಿಶುಗಳ ಸಾವು ಕುರಿತು ಸಮಗ್ರ ಪರಿಶೀಲನೆ: ಶರಣಪ್ರಕಾಶ್ ಪಾಟೀಲ್

Date:

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸಂಭವಿಸಿರುವ ಬಾಣಂತಿಯರು ಮತ್ತು ಶಿಶುಗಳ ಸಾವು ವಿಚಾರದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ವಿಧಾನಪರಿಷತ್‌ನ ಸೋಮವಾರದ ಕಲಾಪದಲ್ಲಿ ಸದಸ್ಯರಾದ ಎನ್‌.ನಾಗರಾಜ್‌ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿರುವ ಸಚಿವರು, ಬೆಳಗಾವಿ ಪ್ರಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸಮಗ್ರ ವರದಿ ಸಲ್ಲಿಸಲು ತಿಳಿಸಿದ್ದೇನೆ ಎಂದರು.

ನಮ್ಮ ರಾಜ್ಯದಲ್ಲಿ ಬಾಣಂತಿಯರು/ಶಿಶುಗಳ ಮರಣ ಪ್ರಮಾಣ 7.97 ಆವರೇಜ್ ಇದೆ. ಬೆಳಗಾವಿಯಲ್ಲಿ 7.72 ರಷ್ಟು ಇದೆ. ಇದನ್ನು ನಾನು ಸಮರ್ಥನೆ ಮಾಡುತ್ತಿಲ್ಲ. ಈ ಕುರಿತು ಮಾಹಿತಿ ನೀಡುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಿಧ ಕಾರಣಗಳ ಬಗ್ಗೆ ತನಿಖೆ

ಬೆಳಗಾವಿ ಬಿಮ್ಸ್ ಗೆ ತುಂಬಾ ದೂರದ ಊರು, ಗ್ರಾಮಗಳಿಂದ ಜನರು ಬರುತ್ತಾರೆ. ಹೈ ರಿಸ್ಕ್ ಪ್ರೆಗ್ನೆನ್ಸಿಸ್ ಕೂಡ ಇರುತ್ತದೆ. ಈ ಮರಣಗಳಿಗೆ ಸಾಕಷ್ಟು ಕಾರಣ ಇವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ತಿಳಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಕೂಡ ಎಲ್ಲಾ ಆಸ್ಪತ್ರೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಈ ಆಸ್ಪತ್ರೆಗೆ ಪ್ಲಾಟಿನಮ್ ಅವಾರ್ಡ್ ಕೂಡ ಬಂದಿದೆ. ಇಲ್ಲಿ ಸಿಬ್ಬಂದಿ ಕೊರತೆ ಅಥವಾ ವೈದ್ಯರ ಸಮಸ್ಯೆ ಇಲ್ಲ ಎಂದು ಡಾ. ಪಾಟೀಲ್‌ ತಿಳಿಸಿದರು.

ಈ ಹಿಂದಿನ ಅವಧಿಯಲ್ಲಿ ನಾನು ಸಚಿವನಾದ ಸಂದರ್ಭದಲ್ಲಿ ಈ ಕಟ್ಟಡ ಪೂರ್ಣ ಆಗಿರಲಿಲ್ಲ. ಈಗ ನಾನು ಮತ್ತೆ ಇದೇ ಖಾತೆ ವಹಿಸಿಕೊಂಡ ನಂತರ ಆ ಕಟ್ಟಡ ಪೂರ್ಣಗೊಳಿಸಿ ಅಗತ್ಯ ಹಾಗೂ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದು ತಿಳಿಸಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯ ಪ್ರಗತಿಯಲ್ಲಿ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆ ಆರಂಭವಾಗಿದೆ. ಆದರೆ ಇನ್ನೂ ಲೋಕಾರ್ಪಣೆ ಆಗಿಲ್ಲ. ಯಾರಿಗೂ ತೊಂದರೆ ಆಗಬಾರದು. ಎಲ್ಲರಿಗೂ ಸೂಕ್ತ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಎಂಟು ಜನ ಸೂಪರ್ ಸ್ಪೆಷಾಲಿಸ್ಟ್‌ಗಳು ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಟ್ಟಡ ಸೋರುತ್ತಿರೋ ಬಗ್ಗೆ ನಾನು ಖುದ್ದಾಗಿ ಪರಿಶೀಲನೆ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.

ದಿನಾಂಕ ಮುಗಿದ ಔಷಧ ಬಳಸುತ್ತಿಲ್ಲ

ದಿನಾಂಕ ಮುಗಿದ ಔಷಧ ವಿತರಣೆ ಆಗುತ್ತಿರುವ ಬಗ್ಗೆ ಲೋಕಾಯುಕ್ತದಿಂದ ಯಾವುದೇ ವರದಿ ಬಂದಿಲ್ಲ. ಔಷಧ ದಿನಾಂಕ ಮುಗಿದಿರೋದು ಇದ್ದರೆ ಅದನ್ನ ಬಳಕೆ ಮಾಡುತ್ತಿಲ್ಲ. ಈ ಕುರಿತು ಲೋಕಾಯುಕ್ತಕ್ಕೂ ಕೂಡ ಮಾಹಿತಿ ಕೊಟ್ಟಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...