ರಾಜ್ಯದಲ್ಲಿ ವೋಟ್ ಚೋರಿ ಮಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಕುಮಾರಸ್ವಾಮಿ ಆರೋಪ

Date:

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

“ಬಿಜೆಪಿ ವೋಟ್ ಚೋರಿಯಿಂದಲೇ ಗೆದ್ದಿದೆ ಸಿಎಂ, ಡಿಸಿಎಂ ಆರೋಪ ಮಾಡಿರುವುದು ಸರಿಯಲ್ಲ. ನಿಜಕ್ಕೇ ಆರೋಪ ಮಾಡಿರುವವರೇ ವೋಟ್ ಚೋರಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಅಧಿಕಾರಕ್ಕೆ ಬಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸೀಟು ಬರುತ್ತೆ ಎಂದು ಅಷ್ಟು ನಿಖರವಾಗಿ ಹೇಗೆ ಹೇಳಿದರು? ಆ ಸಂಖ್ಯೆ ಅವರಿಗೆ ಹೇಗೆ ಗೊತ್ತಿತ್ತು? ಯಾವ ಆಧಾರದಲ್ಲಿ 136 ಸೀಟು ಬರುತ್ತೆ ಅಂತ ಹೇಳಿದರು? ಮತ ಕಳ್ಳತನ ಮಾಡಿರುವುದೇ ಕಾಂಗ್ರೆಸ್ ಪಕ್ಷ. ಈಗ ನೋಡಿದರೆ ಮೋದಿ ಅವರನ್ನು ಟೀಕೆ ಮಾಡುತ್ತಿದೆ” ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿಗೆ 67 ಸೀಟು ಬಂದು ನಿಲ್ಲೋಕೆ ಚೋರಿ ಚೋರಿ ಮಾಡಿದ್ರಾ? ಕಾಂಗ್ರೆಸ್ ನವರು ಜನರನ್ನು ಯಾಮಾರಿಸಿ ಈ‌ ರೀತಿಯ ವ್ಯರ್ಥ ಹೇಳಿಕೆ ಕೊಟ್ಟು ಸಮಯ ವ್ಯರ್ಥ ಮಾಡುತ್ತಿದ್ದಾರೆ. ರಾಜ್ಯದಲಿ ಅನೇಕ ಗಂಭೀರ ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ. ಅದರ ಬಗ್ಗೆ ಇವರ ಗಮನ ‌ಇರಬೇಕು” ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

“ಸಿಎಂ, ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಅಂತ ಯಾರೋ ಹೇಳಿದರು. ನಾನೇನೋ ಯಾವುದೋ ಭಾರೀ ವಿಷಯ ಇರಬೇಕು ಎಂದುಕೊಂಡಿದ್ದೆ. ಆದರೆ ಸತ್ಯವಲ್ಲದ ವೋಟ್ ಚೋರಿ ಬಗ್ಗೆ ಇವರಿಬ್ಬರೂ ಮಾಧ್ಯಮಗೋಷ್ಠಿ ನಡೆಸಿರುವುದು ಸಣ್ಣತನ ಅಷ್ಟೇ. ಸಿಎಂ,‌ಡಿಸಿಎಂ ಸಣ್ಣತನವನ್ನು ರಾಜ್ಯದ ಜನರು ನೋಡಿದ್ದಾರೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ‌ಇಂತಹ ವಿಷಯ ಇಟ್ಟುಕೊಂಡು ಹೋಗ್ತಾ ಇದ್ದಾರೆ. ಕಾಂಗ್ರೆಸ್ ನವರನ್ನು ನಾಡಿನ ಜನ ಶಾಶ್ವತವಾಗಿ ಮನೆಗೆ ‌ಕಳಿಸುವ ದಿನ ದೂರ ಉಳಿದಿಲ್ಲ” ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

“ರಾಜ್ಯದ ಖಜಾನೆ ಖಾಲಿ ಆಗಿದೆ. ಖಾಲಿ ಆಗಿರುವ ಖಜಾನೆ ಹೇಗೆ ತುಂಬಿಸಬೇಕು ಅಂತ ನಿನ್ನೆ (ಶುಕ್ರವಾರ) ಸಭೆ ಮಾಡಿದ್ದಾರೆ. ಜನರ ಮೇಲೆ ಪದೇ ಪದೇ ತೆರಿಗೆ ವಿಧಿಸುವ ಮೂಲಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾವಾಗಲೂ ಜನರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಅನೇಕ ಬಾರಿ ಹೇಳಿದ್ದೇನೆ. ತಪ್ಪು ತಿದ್ದಿಕೊಂಡು ಕೆಲಸ ಮಾಡಿ ಅಂತ. ಆದರೂ ಅವರಿಗೆ ಬುದ್ದಿ ಬಂದಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...