ಕಾಂಗ್ರೆಸ್ ಸರಕಾರ ಸಂವೇದನೆ ಕಳೆದುಕೊಂಡಿದೆ: ಸಿ ಟಿ ರವಿ ಟೀಕೆ

Date:

ರಾಜ್ಯದ ಕಾಂಗ್ರೆಸ್ ಸರಕಾರ ಸಂವೇದನೆಯನ್ನೇ ಕಳೆದುಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿ, “ಬೆಳಗಾವಿಯಲ್ಲಿ ಸರಕಾರ, ಸಚಿವರಿಗೆ ಜನರ ಸಂಕಷ್ಟಕ್ಕಿಂತ ಚುನಾವಣೆಯ ಪ್ರತಿಷ್ಠೆಯೇ ದೊಡ್ಡದಾಗಿದೆ. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಮುಳುಗಿದ್ದಾರೆಯೇ ಹೊರತು ಜನರ ಸಂಕಷ್ಟ ಕೇಳುವ ಸಂವೇದನೆ ಅವರಿಗೆ ಇರಲಿಲ್ಲ” ಎಂದು ಕುಟುಕಿದರು.

“ಲಕ್ಷಾಂತರ ಹೆಕ್ಟೇರ್‌ಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ಮನೆ, ಜಾನುವಾರು ಕಳಕೊಂಡಿದ್ದಾರೆ. ಅನೇಕರು ಜೀವ ಕಳಕೊಂಡು ಸಂಕಷ್ಟದಲ್ಲಿದ್ದಾರೆ. ಈಗಲಾದರೂ ಸಂವೇದನೆ ತೋರಿಸಿ. ರೈತರ ಸಂಕಷ್ಟದ ನಡುವೆ ಅವರಿಗೆ ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎಂಬುದೇ ಮುಖ್ಯವಾಗಿದೆ. ಯಾರು ಮುಖ್ಯಮಂತ್ರಿ ಎಂಬುದು ಮುಖ್ಯವಲ್ಲ; ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನೀವು ರೈತರ, ಜನರ ಸಂಕಷ್ಟಕ್ಕೆ ಸ್ಪಂದಿಸಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎನ್ನುವ ಕಾಲವೇ ಎಂದು ಕೇಳಿದರು. ನಿಮಗೆ ಏನಾಗಿದೆ? ಇನ್ನು ಎರಡೂವರೆ ವರ್ಷ ನಾನೇ ಸಿಎಂ ಎನ್ನುತ್ತಾರೆ. 5 ವರ್ಷ ನಿಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ಭ್ರಷ್ಟಾಚಾರ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದಾರಾ? ಪ್ರಶ್ನೆ ಮಾಡಿದರು.

“ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ? ಜನ ನಮ್ಮ ಬಗ್ಗೆ ಏನು ಅಂದುಕೊಳ್ತಾರೆ ಎಂದು ಅನಿಸಲಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಗುತ್ತಿಗೆದಾರರು ನಿಮಗೇ ಈ ಪತ್ರ ಬರೆದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...