ಪ್ರಕೃತಿ ವಿಕೋಪ ಅಲರ್ಟ್‌ ಮೆಸೇಜ್‌ಗೆ ಗಲಿಬಿಲಿಗೊಂಡ ಕಾಂಗ್ರೆಸ್‌ ನಾಯಕರು

Date:

  • ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಲಿಬಿಲಿ
  • ಕಾರ್ಯಕ್ರಮ ನಡೆಯುವ ವೇಳೆ ಏಕಕಾಲದಲ್ಲಿ ಎಲ್ಲರ ಮೊಬೈಲ್‌ಗೂ ಬಂತು ಮೆಸೇಜ್

ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಮಾಹಿತಿ ನೀಡುವ ಸಲುವಾಗಿ ದೂರ ಸಂಪರ್ಕ ಇಲಾಖೆಯ ಜೊತೆಗೂಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕರ್ನಾಟಕದಲ್ಲಿ ನಡೆಸುತ್ತಿರುವ ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಮೆಸೇಜ್ ಪರೀಕ್ಷೆ ಕಾಂಗ್ರೆಸ್ ನಾಯಕರನ್ನು ಕ್ಷಣಕಾಲ ಗಲಿಬಿಲಿಗೊಳಿಸಿತು.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಏಕಕಾಲದಲ್ಲಿ ಪ್ರಕೃತಿ ವಿಕೋಪ ಅಲರ್ಟ್ ಟ್ರಯಲ್ ಮೆಸೇಜ್ ಬಂತು. ಏಕಕಾಲದಲ್ಲಿ ಎಲ್ಲರಿಗೂ ಮೆಸೇಜ್ ಬಂದ ಹಿನ್ನೆಲೆಯಲ್ಲಿ ವೇದಿಕೆಯಲ್ಲಿದ್ದ ನಾಯಕರು ಕೊಂಚ ಗಲಿಬಿಲಿಗೆ ಒಳಗಾದರು.

ಆಗ ಮಾಧ್ಯಮಪ್ರತಿನಿಧಿಗಳು, ಈ ಶಬ್ದ ವಿಕೋಪ ಮಾಹಿತಿ ಅಲಾರಾಮ್ ಎಂದು ತಿಳಿಸಿದ್ದು ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟರು. ಈ ವೇಳೆ ಭಾಷಣ ಮಾಡುತ್ತಿದ್ದ ಡಿಕೆ ಶಿವಕುಮಾರ್ ಅವರು, ಬಿಜೆಪಿಯವರೂ ಅಲರ್ಟ್ ಆಗಲಿ ಬಿಡಿ ಎಂದು ನಗೆಚಟಾಕಿ ಹಾರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇಂದು ಪ್ರಾಕೃತಿಕ ದುರಂತದ ಮಾಹಿತಿ ನೀಡುವ ‘ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್’ ಪರೀಕ್ಷೆ

ಈ‌ ವೇಳೆ ವೇದಿಕೆಯಲ್ಲಿದ್ದ ಮಾಜಿ‌ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಇತರ ಕೆಲವರು ಅಲರ್ಟ್ ಮೆಸೇಜ್ ಬಗ್ಗೆ ಮಾಹಿತಿ ನೀಡಿದರು. ನೈಸರ್ಗಿಕ ವಿಕೋಪ ಇತ್ಯಾದಿ ತುರ್ತು ಸಂದರ್ಭಗಳಲ್ಲಿ ಜನಸಾಮಾನ್ಯರಿಗೆ ಅಲರ್ಟ್ ಆಗಿರಲು ದೂರಸಂಪರ್ಕ ಇಲಾಖೆ ಮೂಲಕ ಎಲ್ಲರ ಮೊಬೈಲ್​ಗಳಿಗೆ ಈ ತುರ್ತು ಸಂದೇಶಗಳನ್ನು ಕಳುಹಿಸಲಾಗಿದೆ.

ಏನಿದು ಅಲರ್ಟ್ ಮೆಸೇಜ್?

ಪ್ರಾಕೃತಿಕ ವಿಪತ್ತುಗಳ ಸಮಯದಲ್ಲಿ ತುರ್ತು ಸಂವಹನವನ್ನು ಹೆಚ್ಚಿಸಲು ಮತ್ತು ನಮ್ಮ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ದೂರಸಂಪರ್ಕ ಇಲಾಖೆಯು ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಏಕಕಾಲದಲ್ಲಿ ಅಲರ್ಟ್ ಮೆಸೇಜ್ ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...