ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

Date:

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರನ್ನು ಆ.28ರ ವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ವಶಕ್ಕೆ ನೀಡಿ ಬೆಂಗಳೂರಿನ 35ನೇ ಸಿಸಿಎಚ್‍ನ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ಇಂದು ಆದೇಶ ಹೊರಡಿಸಿದ್ದಾರೆ.

ಬೆಟ್ಟಿಂಗ್ ಪ್ರಕರಣದಲ್ಲಿ ತೊಡಗಿರುವ ಆರೋಪದ ಮೇಲೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರನ್ನು ಈಡಿ. ಅಧಿಕಾರಿಗಳು ಆ.22ರಂದು ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಿ, ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ, ಬೆಂಗಳೂರಿನ 35ನೇ ಸಿಸಿಎಚ್ ಕೋರ್ಟ್‍ನಲ್ಲಿ ವಿಚಾರಣೆಗೆ ಒಳಪಡಿಸಿದ್ದರು.

ಕೆ ಸಿ ವೀರೇಂದ್ರ ಪಪ್ಪಿ ಅವರ ಬಳಿ 25 ಕೋಟಿ ರೂಪಾಯಿಗಳಿಗೆ ಅಧಿಕ ಮೊತ್ತದ ನಗದು, ವಿದೇಶಿ ಕರೆನ್ಸಿ, ಕೆ.ಜಿ.ಗಟ್ಟಲೇ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ. ಅವರು ವಿದೇಶದಲ್ಲಿ ವ್ಯವಹಾರ ನಡೆಸುತ್ತಿರುವುದು ದೃಢವಾಗಿದೆ. ಕ್ಯಾಸಿನೋಗಳು, ಆನ್‍ಲೈನ್ ಬೆಟ್ಟಿಂಗ್ ಸೈಟ್‍ಗಳ ವ್ಯವಹಾರ ನಡೆಸಿದ್ದಾರೆ. ಕೋಟ್ಯಾಂತರ ರೂ.ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದ್ದು, ಅವರನ್ನು 14 ದಿನಗಳ ಕಾಲ ಈಡಿ ವಶಕ್ಕೆ ನೀಡಬೇಕು ಎಂದು ಇ.ಡಿ ಪರ ವಕೀಲರು ನ್ಯಾಯಾಲಯವನ್ನು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಆದರೆ, ಕೆ ಸಿ ವೀರೇಂದ್ರ ಪಪ್ಪಿ ಅವರನ್ನು ಇ.ಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ.ವೀರೇಂದ್ರ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ಅವರು, ಕೆ.ಸಿ. ವೀರೇಂದ್ರ ಅವರನ್ನು ಆ.28ರ ವರೆಗೆ ಇ.ಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಪ್ರಕರಣ: ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸೋದರರು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿರುವ ಆರೋಪದ ಮೇಲೆ ಅವರಿಗೆ ಸಂಬಂಧಿಸಿ ದೇಶದ 31 ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳ ತಂಡವು ಶೋಧ ನಡೆಸಿತ್ತು. ಸುಮಾರು 1ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ, ಅಂದಾಜು 6ಕೋಟಿ ರೂ.ಮೌಲ್ಯದ ಚಿನ್ನಾಭರಣಗಳು, ಸುಮಾರು 10 ಕೆ.ಜಿ. ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳು ಸೇರಿ 12ಕೋಟಿ ರೂ. ನಗದನ್ನು ಆರೋಪಿಗಳಿಂದ ವಶಪಡಿಸಿಕೊಂಡು, ವಿಚಾರಣೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...