ಚೀನಾ ಕಂಪೆನಿಗಳಿಂದ ದೇಣಿಗೆ‌ | ಮೊದಲ ಅಪರಾಧಿ ಸ್ಥಾನದಲ್ಲಿ ಮೋದಿ: ಕಾಂಗ್ರೆಸ್ ಕಿಡಿ

Date:

  • ಪಿಎಂ ಕೇರ್ಸ್ ಎಂಬ ಗೋಲ್ಮಾಲ್ ನಿಧಿಗೆ ಚೀನಾ ಕಂಪೆನಿಗಳಿಂದ ಕೋಟಿ ಕೋಟಿ ಹಣ ಸಂಗ್ರಹ
  • ಪಟೇಲರ ಪ್ರತಿಮೆ ನಿರ್ಮಾಣದ ಹೊಣೆ ಚೀನಾ ಕಂಪೆನಿಗೆ ನೀಡಿದ್ದು ಕೂಡ ಕೇಂದ್ರ ಸರ್ಕಾರವೇ

ಚೀನಾ ಕಂಪೆನಿಗಳಿಂದ ದೇಣಿಗೆ ಸ್ವೀಕರಿಸುವುದು ಅಪರಾಧವೆಂದಾದರೆ ಮೊದಲು ಅಪರಾಧಿ ಸ್ಥಾನದಲ್ಲಿ ಮೋದಿಯೇ ನಿಲ್ಲುತ್ತಾರೆ. ಪಿಎಂ ಕೇರ್ಸ್ ಎಂಬ ಗೋಲ್ಮಾಲ್ ನಿಧಿಗೆ ಚೀನಾ ಕಂಪೆನಿಗಳಿಂದ ಕೋಟಿ ಕೋಟಿ ಹಣ ಸಂಗ್ರಹಿಸಲಾಗಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಕುರಿತು ಎಕ್ಸ್‌ನಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್‌, “ಚೀನಾ ಕಂಪೆನಿಗಳಿಂದ ದೇಣಿಗೆ ಪಡೆಯಲಾಗಿದೆ ಎಂದು ಆರೋಪಿಸಿ ನ್ಯೂಸ್ ಕ್ಲಿಕ್ ಮಾಧ್ಯಮ ಸಂಸ್ಥೆಯ ಮೇಲೆ ದಾಳಿ ಮಾಡಲಾಗಿದೆ. ಸರ್ದಾರ್ ಪಟೇಲರ ಪ್ರತಿಮೆ ನಿರ್ಮಾಣದ ಹೊಣೆಯನ್ನು ಚೀನಾ ಕಂಪೆನಿಗೆ ನೀಡಿದ್ದು ಕೂಡ ಕೇಂದ್ರ ಸರ್ಕಾರವೇ. ಮೋದಿಯವರಿಗೆ ದಮ್ಮು ತಾಕತ್ತಿದ್ದರೆ ಭಾರತದ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ಮಾಡುವ ಬದಲು ಭಾರತವನ್ನು ಆಕ್ರಮಿಸಿರುವ ಚೀನಾ ಮೇಲೆ ದಾಳಿ ಮಾಡಲಿ. ಕನಿಷ್ಠ ಪಕ್ಷ ‘ಚೀನಾ’ ಎಂದು ಹೆಸರು ಹೇಳಿ ವಾಗ್ದಾಳಿಯನ್ನಾದರೂ ಮಾಡಲಿ!” ಎಂದು ಲೇವಡಿ ಮಾಡಿದೆ.

“ಇತ್ತೀಚೆಗಷ್ಟೇ ಜಿ20 ಸಮಾವೇಶದ ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷರು ಭಾರತದ ಮಾಧ್ಯಮಗಳ ಸ್ವಾತಂತ್ರ್ಯವು ಅಪಾಯದಲ್ಲಿದೆ ಎಂದು ವಿದೇಶದಲ್ಲಿ ಕಳವಳ ವ್ಯಕ್ತಪಡಿಸಿದ್ದರು. ಮೋದಿಗೆ ಮಾಧ್ಯಮ ಸ್ವಾತಂತ್ರ್ಯವನ್ನು ರಕ್ಷಿಸುವಂತೆ ಬುದ್ದಿ ಹೇಳಿದ್ದೇನೆ ಎಂದಿದ್ದರು. ಈ ಅವಮಾನದ ಬೆನ್ನಲ್ಲೇ ಮೋದಿ ಸರ್ಕಾರ ನ್ಯೂಸ್ ಕ್ಲಿಕ್ ಸಂಸ್ಥೆಯ ಮೇಲೆ ದಾಳಿ ಮಾಡಿದೆ. ಭಾರತದ ಸತ್ಯ ಹೇಳುವ ಮಾಧ್ಯಮಗಳ ಕತ್ತು ಹಿಸುಕಲಾಗುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮೋದಿ ಭಜನೆಯ ‘ಗೋದಿ ಮೀಡಿಯಾ’ಗಳಿಗೆ ಮಾತ್ರ ಇಲ್ಲಿ ಸ್ವತಂತ್ರವಿದೆ” ಎಂದು ಕಟುವಾಗಿ ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅದಾನಿ ಕಂಪೆನಿಯಲ್ಲಿ ಚೀನಾದವರ ಹೂಡಿಕೆ ಇದೆ, ‘ಅದಾನಿ ಚೀನಿ ಬಾಯಿ ಬಾಯಿ’ ಎನ್ನುವಂತಿದೆ. ನರೇಂದ್ರ ಮೋದಿ ಅವರೇ, ಅದಾನಿ ಕಂಪೆನಿ ಮೇಲೆ ಇಡಿ ದಾಳಿ ಮಾಡುವುದು ಯಾವಾಗ? ನಿಮ್ಮ ಗೆಳೆಯನ ಹಿತಕ್ಕಾಗಿ ಚೀನಾದ ಅತಿಕ್ರಮಣ ನೋಡಿ ಸುಮ್ಮನಿದ್ದೀರಾ? ಭಾರತದ ಭೂಮಿಯನ್ನು ಬಲಿ ಕೊಡುತ್ತಿದ್ದೀರಾ” ಎಂದು ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...