ಕೊರೋನಾ | ಐಎಲ್‌ಐ ಮತ್ತು ಸಾರಿ ಇರೋರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ದಿನೇಶ್ ಗುಂಡೂರಾವ್

Date:

ಐಎಲ್‌ಐ ಮತ್ತು ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು.

“ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್‌ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್‌ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ ಕೋವಿಡ್ ಟೆಸ್ಟ್ ನಡೆಸುವಂತೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

“ರೋಗ ಲಕ್ಷಣಗಳು ಇರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಮಾಡಲಾಗುತ್ತಿದೆ. ಮನೆಯಲ್ಲಿ ಐಸೊಲೇಷನ್ ಆಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಹೇಳಲಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಕೋವಿಡ್ ಇಳಿಕೆಯ ಟ್ರೆಂಡ್ ಶುರುವಾಗಬಹುದು ಎಂದು ನಿರೀಕ್ಷಿಸಲಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನ ಅಳವಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನಾಳೆ ಕೊರೋನಾ ಹೆಲ್ಪ್ ಲೈನ್ ಲೋಕಾರ್ಪಣೆ ಮಾಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...