ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

Date:

ಬೆಂಗಳೂರು- ಸಾಂಸ್ಕೃತಿಕ ಲೋಕವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಕಾರ್ಪೊರೇಟ್ ಲೋಕ ಯತ್ನಿಸುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಹಿರಿಯ ಪತ್ರಕರ್ತ, ಸಾಹಿತಿ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ಕಲಾಗ್ರಾಮದಲ್ಲಿ ಹಮ್ಮಿಕೊಂಡಿದ್ದ ತಿಂಗಳ ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿ ಗೌರವವನ್ನು ಸ್ವೀಕರಿಸಿ ಮಾತನಾಡಿದರು.

ನಾಲ್ಕು ಗೋಡೆಗಳ ಮಧ್ಯೆ ಇದ್ದ ರಂಗಭೂಮಿಯನ್ನು ಅಲ್ಲಿಂದ ಬಿಡುಗಡೆ ಮಾಡಿ ಜನರ ಬಳಿಗೆ ಕೊಂಡೊಯ್ಯಲು ದೊಡ್ಡ ಚಳವಳಿ ನಡೆಯಿತು. ಜನರ ಸಮಸ್ಯೆಗಳನ್ನು ಬಿಂಬಿಸುವ ಕೆಲಸ ನಡೆಯಿತು. ಆದರೆ ಈಗ ಕಾರ್ಪೊರೇಟ್ ಜಗತ್ತು ಜನರ ಬಳಿಯಿಂದ ಕಿತ್ತು ಮತ್ತೆ ಅದನ್ನು ನಾಲ್ಕು ಗೋಡೆಯ ಮಧ್ಯೆ ಬಂಧಿಸಲು ಯತ್ನಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗಭೂಮಿ ಜನರ ಒಡನಾಡಿ. ಅದು ಪ್ರಶ್ನಿಸಲು ಪ್ರೇರೇಪಿಸುತ್ತದೆ. ಸಮಾಜ ಬದಲಾವಣೆಗೆ ದಾರಿಮಾಡಿಕೊಡುತ್ತದೆ. ಆದ ಕಾರಣಕ್ಕಾಗಿಯೇ ರಂಗಭೂಮಿಯ ಮನಸ್ಥಿತಿಯನ್ನು ಬದಲಿಸುವ ತುರ್ತು ಪ್ರಭುತ್ವಕ್ಕೆ ಇದೆ. ಸಾಹಿತ್ಯ ಹಾಗೂ ರಂಗಭೂಮಿಯ ಮೇಲೆ ಭಯದ ಪರದೆಯನ್ನು ಸೃಷ್ಟಿಸಿ ಅವು ಸ್ವಯಂ ಸೆನ್ಸಾರ್ ಶಿಪ್ ಹೇರಿಕೊಳ್ಳುವಂತೆ ಪ್ರಭುತ್ವ ಒತ್ತಾಯಿಸುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ. ಇದರ ವಿರುದ್ಧ ರಂಗ ಲೋಕ ಎಚ್ಚೆತ್ತುಕೊಳ್ಳಬೇಕು ಎಂದರು.

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ ಕೆ ವಿ ನಾಗರಾಜಮೂರ್ತಿ ಅವರು ಮಾತನಾಡಿ, ನಾಟಕ ಅಕಾಡೆಮಿ ಬೆಂಗಳೂರಿನ ಹೊರಗಿನ ತಂಡಗಳನ್ನು ಆಹ್ವಾನಿಸಿ ನಾಟಕ ಪ್ರದರ್ಶನಕ್ಕೆ ದಾರಿ ಮಾಡಿಕೊಟ್ಟಿದೆ. ಈ ಮೂಲಕ ನಗರ ಹಾಗೂ ಗ್ರಾಮೀಣ ತಂಡಗಳ ನಡುವೆ ಸಂವಾದ ಸಾಧ್ಯವಾಗಿದೆ. ಇದು ಆಶಾದಾಯಕ ಬೆಳವಣಿಗೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸಂತೋಷ ನಾಯಕ ಪಟ್ಲ ಅವರು ನಿರ್ದೇಶಿಸಿದ ‘ದಿ ಫೈಯರ್’ ನಾಟಕವನ್ನು ಪ್ರದರ್ಶಿಸಲಾಯಿತು. ಉಡುಪಿಯ ಭೂಮಿಗೀತ ಸಾಂಸ್ಕೃತಿಕ ವೇದಿಕೆ ನಾಟಕವನ್ನು ಪ್ರದರ್ಶಿಸಿತು. ನಾಟಕ ಅಕಾಡೆಮಿ ಸದಸ್ಯರಾದ ಜಗದೀಶ್ ಜಾಲ ಹಾಗೂ ಲವಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...