ಕೋರ್ಟ್ ಮೇಲ್ವಿಚಾರಣೆಯಲ್ಲಿ ಇವಿಎಂ ತಾಂತ್ರಿಕ ಪರಿಶೋಧನೆ ನಡೆಯಲಿ: ಪ್ರಿಯಾಂಕ್ ಖರ್ಗೆ

Date:

ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂಗಳು) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತಾಂತ್ರಿಕ ಆಡಿಟ್ ಜೊತೆಗೆ ನ್ಯಾಯಾಂಗ, ಶೈಕ್ಷಣಿಕ ಮತ್ತು ಕೈಗಾರಿಕಾ ಮೇಲ್ವಿಚಾರಣೆಯಲ್ಲಿ ನೈತಿಕ ಹ್ಯಾಕಥಾನ್ ನಡೆಸಲು ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ.

ಹಾರ್ಡ್ವೇರ್‌ ಮತ್ತು ಫರ್ಮ್ವೇರ್ನಿಂದ ಚಿಹ್ನೆ-ಲೋಡಿಂಗ್, ಸಂಗ್ರಹಣೆ, ಚಲನೆ ಮತ್ತು ಎಣಿಕೆ ಪ್ರಕ್ರಿಯೆಗಳವರೆಗೆ ಸಂಪೂರ್ಣ ಇವಿಎಂ-ವಿವಿಪ್ಯಾಟ್ ಪ್ರಕ್ರಿಯೆಗಳನ್ನು ಸಂಸ್ಥೆಯ ನೇತೃತ್ವದಲ್ಲಿ ಪಾರದರ್ಶಕ ಮೌಲ್ಯಮಾಪನ ಮಾಡುವಂತೆ ಕೋರಿ ಅವರು 2024ರ ಡಿ.3ರಂದು ಭಾರತೀಯ ಚುನಾವಣಾ ಆಯೋಗದ ಮುಂದೆ ಅಧಿಕೃತ ಪ್ರಸ್ತಾವನೆಯನ್ನು ಪ್ರಿಯಾಂಕ್ ಖರ್ಗೆ ಮಂಡಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಜೆ ಬ್ಯಾನ್‌ನಿಂದ ಕಲೆಗೆ ಪ್ರೋತ್ಸಾಹ, ಕೋಮು ಉದ್ವಿಗ್ನತೆಗೆ ಕಡಿವಾಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಪ್ರಸ್ತಾವನೆಯ ಆಧಾರದ ಮೇಲೆ, ಪ್ರಿಯಾಂಕ್ ಖರ್ಗೆ ಸೆ.6ರಂದು ಪತ್ರವೊಂದನ್ನು ಹೊರಡಿಸಿ, ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ರಾಜ್ಯ ಸರಕಾರವು ಪ್ರಮುಖ ಸಂಸ್ಥೆಗಳು (ಐಐಎಸ್ಸಿ, ಐಐಟಿಗಳು, ಐಐಐಟಿಗಳು) ಮತ್ತು ಹೆಸರಾಂತ ಆರ್ ಅಂಡ್ ಡಿ ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಸಮಯಕ್ಕೆ ಸೀಮಿತವಾದ, ಸ್ವತಂತ್ರವಾಗಿ ಮೇಲ್ವಿಚಾರಣೆ ಮಾಡಲಾದ ತಾಂತ್ರಿಕ ಪರಿಶೋಧನೆಯನ್ನು ನಡೆಸಲು ಅನುಮತಿಸುವಂತೆ ಒತ್ತಾಯಿಸಿದ್ದಾರೆ.

‘ವೋಟ್ ಚೋರಿ’ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಂಗಳೂರಿನ ಮಹದೇವಪುರದಲ್ಲಿ ನಡೆದ ಅಕ್ರಮಗಳು, ಹರಿಯಾಣದ ಪಾಣಿಪತ್ ನಲ್ಲಿ ಇವಿಎಂಗಳ ಮರು ಎಣಿಕೆ ಮತ್ತು ಕಲಬುರಗಿಯ ಆಳಂದದಲ್ಲಿ ನಡೆದ ಮತದಾರರ ಹೆಸರನ್ನು ಕೈಬಿಟ್ಟಿರುವ ವಂಚನೆಯ ಹಿನ್ನೆಲೆಯಲ್ಲಿ ಸಚಿವರು ಈ ಒತ್ತಾಯವನ್ನು ಮಾಡಿದ್ದಾರೆ.

ಈ ಉದ್ದೇಶವು ಪಕ್ಷಪಾತವಲ್ಲ, ಪ್ರಜಾಪ್ರಭುತ್ವದ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಬಲಪಡಿಸುವುದು ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...