ಆರ್‌ಎಸ್‌ಎಸ್‌ ಕುರಿತು ಟೀಕೆ: ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ನೋಟಿಸ್‌

Date:

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಟೀಕಿಸಿದ್ದ ಆರೋಪದ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್ ಹಾಗೂ ಕಾಂಗ್ರೆಸ್‌ ಯುವ ನಾಯಕ ಮೊಹಮ್ಮದ್ ಹ್ಯಾರಿಸ್‌ ನಲಪಾಡ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರು ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ತೇಜಸ್‌ ಎ ಎಂಬಾತ ಮೂವರ ವಿರುದ್ಧವೂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದೆ ಎಂದು ವರದಿಯಾಗಿದೆ.

2025ರ ಅಕ್ಟೋಬರ್‌ನಲ್ಲಿ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಶಾಲಾ-ಕಾಲೇಜುಗಳ ಮೈದಾನಗಳು ಸೇರಿದಂತೆ ಸರ್ಕಾರಿ ಆವರಣದಲ್ಲಿ ಅನುಮತಿ ಪಡೆಯದೆ ನಡೆಸುವ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದರು. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮುಗಿಯದ ಅಮೆರಿಕದ ‘ಸಾಮ್ರಾಜ್ಯಶಾಹಿ’ ಹಸಿವು: ವೆನೆಜುವೆಲಾ ನಂತರ ಗ್ರೀನ್‌ಲ್ಯಾಂಡ್‌ ಸರದಿ?

ಆ ಪತ್ರ ಮತ್ತು ಪೋಸ್ಟ್‌ ಆಧರಿಸಿ ದೂರು ನೀಡಿರುವ ಆರ್‌ಎಸ್‌ಎಸ್‌ ಕಾರ್ಯಕರ್ತ ತೇಜಸ್, “ಪ್ರಿಯಾಂಕ್‌ ಖರ್ಗೆ ಅವರ ಪೋಸ್ಟ್‌ ಮತ್ತು ಪತ್ರದಲ್ಲಿ ಆರ್‌ಎಸ್‌ಎಸ್‌ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಲಾಗಿದೆ. ಅಲ್ಲದೆ, ಅವರ ಪೋಸ್ಟ್‌ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ದಿನೇಶ್‌ ಗುಂಡೂರಾವ್ ಕೂಡ ಅದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ನಡಪಾಡ್ ಕೂಡ ಯೂಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸಂಘದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ, ನನಗೆ ತೀವ್ರವಾಗಿ ನೋವಾಗಿದೆ. ಇಂತಹ ಹೇಳಿಕೆಗಳು ಸಂಘದ ಕುರಿತು ಸಾರ್ವಜನಿಕರಲ್ಲಿ ಕೆಟ್ಟು ಅಭಿಪ್ರಾಯಗಳನ್ನು ರೂಪಿಸುತ್ತವೆ” ಎಂದು ಆರೋಪಿಸಿದ್ದಾರೆ.

ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ಮೂವರಿಗೂ ಬಿಎನ್‌ಎಸ್‌ಎಸ್‌ನ ಸೆಕ್ಷನ್ 223ರ ಅಡಿಯಲ್ಲಿ ನೋಟಿಸ್‌ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆಯಲ್ಲಿ 14ಕ್ಕೆ ಮುಂದೂಡಿಸಿದ್ದು, ಅಂದು ಸಚಿವರು ವಿಚಾರಣೆಗೆ ಹಾಜರಾಗುಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...