ರಾಜ್ಯದಲ್ಲಿ ಬರೀ ಮೂರು ವರ್ಷದಲ್ಲೇ ಸೈಬರ್ ಕ್ರೈಂ ಪ್ರಕರಣ ದುಪ್ಪಟ್ಟು!

Date:

ಕರ್ನಾಟಕದಲ್ಲಿ ಮೂರು ವರ್ಷದ ಅವಧಿಯಲ್ಲೇ ಸೈಬರ್ ಕ್ರೈಂ ಪ್ರಕರಣಗಳು ದುಪ್ಪಟ್ಟಾಗಿದೆ ಎಂದು ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ದೊಡ್ಡ ಸವಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“2020ರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 11,000 ಸೈಬರ್ ಕ್ರೈಂ ಪ್ರಕರಣಗಳನ್ನು ದಾಖಲಿಸಿದೆ. 2023ರ ವೇಳೆಗೆ ಈ ಸಂಖ್ಯೆಯು ದುಪ್ಪಟ್ಟಾಗಿ 22,000ಕ್ಕೆ ತಲುಪಿದೆ. ಈ ಮೂರು ವರ್ಷಗಳ ಅವಧಿಯಲ್ಲಿ ದಾಖಲಾದ ಈ ಪ್ರಕರಣಗಳು ಕರ್ನಾಟಕ ರಾಜ್ಯ ಪೊಲೀಸರಿಗೆ ಮಾತ್ರವಲ್ಲ ಐಟಿ ವಲಯಕ್ಕೆ ದೊಡ್ಡ ಸವಾಲಾಗಿದೆ,” ಎಂದು ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಹೇಳಿದರು.

cyber crime
ಸೈಬರ್ ಕ್ರೈಂ ಪ್ರಕರಣ

ಬೆಂಗಳೂರಿನಲ್ಲೇ ಅಧಿಕವಾಗಿ ಇಂತಹ ಅಪರಾಧಗಳು ನಡೆಯುತ್ತಿದೆ ಎಂದು ಅಲೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ದಾಖಲಾದ ನಾಲ್ಕು ಸೈಬರ್ ಕ್ರೈಂ ಪ್ರಕರಣಗಳಲ್ಲಿ ಒಂದು ಬೆಂಗಳೂರಿಗೆ ಸಂಬಂಧಿಸಿದ್ದು ಆಗಿರುತ್ತದೆ. ಒಟ್ಟು ಪ್ರಕರಣದಲ್ಲಿ ಶೇಕಡ 25 ರಷ್ಟು ಬೆಂಗಳೂರಿಗೆ ಸೇರಿದ್ದು ಎಂದು ಡಿಜಿಪಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಷನಲ್ ಕ್ರೈಂ ರಿಪೋರ್ಟಿಂಗ್‌ ಪೋರ್ಟಲ್ ಮೂಲಕ ಕಳೆದ 9 ತಿಂಗಳ ಅವಧಿಯಲ್ಲಿ 64,000 ದೂರುಗಳನ್ನು ದಾಖಲಿಸಲಾಗಿದೆ. ಈ ಪೈಕಿ ಒಟ್ಟಾಗಿ 70 ಕೋಟಿ ರೂಪಾಯಿಯನ್ನು ಸೈಬರ್ ವಂಚನೆಗೆ ಒಳಗಾದವರಿಗೆ ಹಿಂದಿರುಗಿಸಲಾಗಿದೆ ಎಂದು ಪೊಲೀಸ್ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಐಟಿ ಕ್ಷೇತ್ರ, ಅಕಾಡೆಮಿಯಾ ಮತ್ತು ಇತರೆ ಸ್ಟೇಕ್‌ಹೋಲ್ಡರ್‌ಗಳ ಜೊತೆಗೆ ಸೇರಿಕೊಂಡು ನಾವು ಈ ಸೈಬರ್ ಅಪರಾಧದ ಜಾಲ ಪತ್ತೆ ಹಚ್ಚುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು. ಇನ್ನು ಕಳೆದ ನಾಲ್ಕು ವರ್ಷಗಳಲ್ಲಿ 31,000 ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳನ್ನು, ನ್ಯಾಯಾಂಗ ಅಧಿಕಾರಿಗಳು ಮತ್ತು ಪ್ರಾಸಿಕ್ಯೂಟರ್‌ಗಳಿಗೆ ಈ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸವಾಲು ಎಂಬ ವಿಷಯದಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ್ದ ಡಿಐಜಿ ವಂಶಿ ಕೃಷ್ಣ ಕಳೆದ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಸೈಬರ್ ಕ್ರೈಂ ಪ್ರಕರಣಗಳು ಶೇಕಡ 183ರಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಬದಲಾಗುತ್ತಾ ಸಾಗುತ್ತಿದೆ ಎಂದಿದ್ದರು.

“ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿ ತುಂಬಾ ಗಂಭೀರವಾಯಿತು. ವಂಚಕರು ಬೇರೆ ಬೇರೆ ರೀತಿಯ ತಂತ್ರವನ್ನು ಅಪರಾಧಕ್ಕೆ ಬಳಸುತ್ತಿದ್ದಾರೆ. ಇತ್ತೀಚೆಗೆ ಎಐ ಚಾಲಿತ ಮಾಲ್ವೇರ್ ಬಳಸಿ ವಂಚನೆ ಮಾಡಿರುವುದು ತಿಳಿದು ಬಂದಿದೆ. ಆದ್ದರಿಂದಾಗಿ ಈ ಅಪರಾಧಿಗಳನ್ನು ಪತ್ತೆ ಹಚ್ಚುವುದೇ ಕಷ್ಟವಾಗಿದೆ,” ಎಂದು ಹೇಳಿದ್ದರು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...