ಕಾಂಗ್ರೆಸ್ಸಿಗರಿಂದ ಹಗಲು ದರೋಡೆ, ಡಕಾಯಿತರಿಂದ ರೋಡಲ್ಲಿ ದರೋಡೆ: ಆರ್‌ ಅಶೋಕ್‌ ಟೀಕೆ

Date:

ದರೋಡೆ ಮಾಡುವವರಿಗೆ ಕರ್ನಾಟಕ ಒಂದು ರೀತಿ ಸ್ವರ್ಗವಾಗಿದೆ. ಒಂದು ಕಡೆ ಕಾಂಗ್ರೆಸ್ಸಿಗರಿಂದ ಹಗಲುದರೋಡೆ, ಇಲ್ಲಿ ಡಕಾಯಿತರಿಂದ ರೋಡಲ್ಲೇ ಹಗಲು ದರೋಡೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಗುರುವಾರ ಮಾತನಾಡಿ, “ಬ್ರಾಂಡ್ ಬೆಂಗಳೂರಿನ ಮತ್ತೊಂದು ಅವತಾರ ಬೆಂಗಳೂರು ದರೋಡೆಗಳ ನಗರ ಆಗುತ್ತಿದೆ. ಬೆಂಗಳೂರಿನಲ್ಲಿ 7 ನಿಮಿಷದಲ್ಲಿ 7 ಕೋಟಿ ಮೊತ್ತದ ದರೋಡೆ ನಡೆದಿದೆ. ಇದು ಕರ್ನಾಟಕ ಸರಕಾರದ ಹೊಸ ಸ್ಕೀಂ; ಇದು 5 ಗ್ಯಾರಂಟಿಗಳಂತಿದೆ. 7 ನಿಮಿಷದಲ್ಲಿ 7 ಕೋಟಿ ಪಡೆಯುವುದು ಹೇಗೆಂದು ಸರಕಾರವು ಜನರಿಗೆ ತೋರಿಸಿದೆ” ಎಂದು ಲೇವಡಿ ಮಾಡಿದರು.

“ಜನರು ಭಯಭೀತರಾಗಿದ್ದು, ಬ್ಯಾಂಕ್‍ಗಳ ಬಳಿ ಹೋಗಲು ಆತಂಕಪಡುತ್ತಿದ್ದಾರೆ. ಹಾಡಹಗಲಲ್ಲೇ ಇದು ಸಾಧ್ಯವೇ? ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಿ.ಸಿ.ಟಿವಿ ಕ್ಯಾಮೆರಾಗಳಿವೆ. ಒಂದು ಲಕ್ಷಕ್ಕೂ ಹೆಚ್ಚು ಜನ ಪೊಲೀಸರಿದ್ದಾರೆ. ಕಮೀಷನರ್ ಕಚೇರಿ, ಮನೆ, ಡಿ.ಜಿ. ಕಚೇರಿ, ಮನೆ ಇಲ್ಲೇ ಇದೆ. ಮುಖ್ಯಮಂತ್ರಿಗಳ ಮನೆ, ಸ್ಪೆಷಲ್ ವ್ಯಕ್ತಿ, ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮನೆ ಕೂಡ ಇಲ್ಲೇ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಕಡೆ ಕಾಂಗ್ರೆಸ್ಸಿನವರ ಹಗಲುದರೋಡೆ, ಇಲ್ಲಿ ಡಕಾಯಿತರಿಂದ ರೋಡಲ್ಲೇ ಹಗಲು ದರೋಡೆ. ಇದು ಕಾಕತಾಳೀಯ ಎಂಬಂತಿದೆ. ಡಿ.ಕೆ.ಶಿವಕುಮಾರ್ ಟನೆಲ್ ರಸ್ತೆಯ ಪಾಯಿಂಟ್‍ನಲ್ಲೇ ಇದಾಗಿದೆ. ಅದೂ ಕಾಕತಾಳೀಯ ಅನಿಸುತ್ತದೆ. ದರೋಡೆ ಮಾಡುವವರಿಗೆ ಕರ್ನಾಟಕ ಒಂದು ರೀತಿ ಸ್ವರ್ಗವಾಗಿದೆ” ಎಂದು ಕಿಡಿ ಕಾರಿದರು.

“ಬೀದರ್, ಮಂಗಳೂರು ಬಳಿಕ ಈಗ ಬೆಂಗಳೂರಿಗೆ ಬಂದಿದೆ. ಅಲ್ಲಿ ಕೈಚಳಕ ತೋರಿಸುವುದೇನು? ಎಂಬಂತೆ ರಾಜಧಾನಿ ಬೆಂಗಳೂರಿನಲ್ಲಿ ಕೈಚಳಕ ತೋರಿಸಿದ್ದಾರೆ. ಸರಕಾರ ಸತ್ತು ಹೋಗಿದೆ ಎಂದು ಜನರು ತಿಳಿದುಕೊಂಡಿದ್ದಾರೆ. ಸರಕಾರ, ಪೊಲೀಸರ ಭಯ ಇದ್ದಿದ್ದರೆ, ದರೋಡೆ ಮಾಡಿದರೆ ಗುಂಡು ಹಾಕುವ, ಶಿಕ್ಷೆಯ ಭಯ ಇದ್ದಲ್ಲಿ ಹೀಗೆ ಮಾಡುತ್ತಿರಲಿಲ್ಲ” ಎಂದು ವಿಶ್ಲೇಷಿಸಿದರು.

“ಕುರ್ಚಿ ಗಲಾಟೆಗಾಗಿ ಮಂತ್ರಿಗಳು, ಮುಖ್ಯಮಂತ್ರಿ ಎಲ್ಲರೂ ದೆಹಲಿ ಕಡೆ ಮುಖ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟಿದೆ; ಸತ್ತು ಹೋಗಿದೆ. 24 ಗಂಟೆಯಲ್ಲಿ ಬಂಧಿಸಬೇಕು; ಸುಳಿವು ಸಿಕ್ಕಿದೆ ಎಂದು ಹೇಳಿದ್ದಾರೆ. ಆಗಲೇ ದರೋಡೆ ಆಗಿ 24 ಗಂಟೆ ಮುಗಿದು 26 ಗಂಟೆ ಆಗಿದೆ. ಸುಳಿವೆಲ್ಲ ಸಿಕ್ಕಿದ್ದರೆ ಯಾಕೆ ಬಂಧಿಸಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...