ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು.
ಸಚಿವರಾದ ಎಚ್ ಕೆ ಪಾಟೀಲ್, ಎನ್ ಎಸ್ ಬೋಸರಾಜು, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಸುಧಾಕರ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಆರ್ ವಿ ದೇಶಪಾಂಡೆ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ವಿ ಕಾತರಕಿ, ಎಸಿಎಸ್ ಗಳಾದ ಗೌರವ್ ಗುಪ್ತಾ, ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಕೃತಿ ನಿರೂಪಕ, ಹಿರಿಯ ಪತ್ರಕರ್ತ ಹಮೀದ್ ಪಾಳ್ಯ ಮತ್ತಿತರರು ಉಪಸ್ಥಿತರಿದ್ದರು.




