ಕೊಲೆ ಬೆದರಿಕೆ | ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಭಾರಿ ಪಿತೂರಿ: ಬಿ ಕೆ ಹರಿಪ್ರಸಾದ್‌ ಗಂಭೀರ ಆರೋಪ

Date:

ಸತ್ಯ, ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತ್ಮಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎಂದು ಘೋಷಿಸುತ್ತಿರುವುದು ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಹಿಡಿದ ಕೈಗನ್ನಡಿ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಟ್ಟು ಹೊಡೆಯುತ್ತೇವೆ ಎಂದು ಹೇಳುವ ಮೂಲಕ ಕೇರಳ ಬಿಜೆಪಿ ಮಾಧ್ಯಮ ವಕ್ತರ ಪಿಂಟು ಮಹಾದೇವನ್‌ ಕೊಲೆ ಬೆದರಿಕೆ ಹಾಕಿರುವುದನ್ನು ಉಲ್ಲೇಖಿಸಿ ಬಿ ಕೆ ಹರಿಪ್ರಸಾದ್‌ ಅವರು ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ದೇಶದ ಕೋಟ್ಯಂತರ ಜನರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್ ಗಾಂಧಿಯವರಿಗೆ ಈಗಾಗಲೇ ಬಿಜೆಪಿಯ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಈಗ ಪಕ್ಷದ ವಕ್ತಾರರೇ ಖಾಸಗಿ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿಯೇ ” ಬಿಜೆಪಿಯ ವಿರುದ್ಧ ರಾಹುಲ್ ಗಾಂಧಿ ಮಾತಾಡಿದರೆ ಗುಂಡು ಹಾರಿಸುತ್ತೇವೆ” ಎಂದು ಹೇಳಿಕೆ ನೀಡುವುದು ರಾಹುಲ್ ಗಾಂಧಿಯವರ ವಿರುದ್ಧ ಗಂಭೀರವಾಗಿ ಭಾರಿ ಪಿತೂರಿ ನಡೆಸಿರುವುದು ಸ್ಪಷ್ಟವಾಗುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ. ಇಂತಹ ಅಪಾಯವನ್ನು ದೇಶದ ಪ್ರತಿಯೊಬ್ಬ ನಾಯಕರು ಖಂಡಿಸಬೇಕಿದೆ. ದೇಶದ ವಿರೋಧ ಪಕ್ಷದ ನಾಯಕರನ್ನೇ ಬಹಿರಂಗವಾಗಿ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎನ್ನುವುದು ಬಿಜೆಪಿಯ ದ್ವೇಷಮಯ ರಾಜಕೀಯದ ಪರಮಾವಧಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕೂಡಲೇ ಬಿಜೆಪಿ ಪಕ್ಷ ಕೊಲೆ ಹೇಳಿಕೆ ನೀಡಿರುವ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಲಿ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...