ದೆಹಲಿ ಕಾರ್ ಸ್ಫೋಟ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು: ಬಿ ಕೆ ಹರಿಪ್ರಸಾದ್‌

Date:

ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ದಾಳಿಯನ್ನು ಖಂಡಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಷ್ಟ್ರದ ರಾಜಧಾನಿಯಲ್ಲೇ ಇಂತಹ ಕೃತ್ಯ ನಡೆದಿರುವುದು ಸರ್ಕಾರದ ಭದ್ರತಾ ವ್ಯವಸ್ಥೆಯ ವಿಫಲತೆಯ ಸ್ಪಷ್ಟ ನಿದರ್ಶನ. ದೆಹಲಿಯಂತಹ ಉನ್ನತ ಭದ್ರತಾ ವಲಯದಲ್ಲಿ ಸ್ಫೋಟ ಸಂಭವಿಸಿರುವುದು ಕೇವಲ ಕಾನೂನು ಸುವ್ಯವಸ್ಥೆಯ ವಿಷಯವಲ್ಲ — ಇದು ರಾಷ್ಟ್ರದ ಆಂತರಿಕ ಭದ್ರತೆಯ ಮೇಲಿನ ನಂಬಿಕೆಗೆ ಬಿದ್ದ ಭಾರಿ ಹೊಡೆತ” ಎಂದಿದ್ದಾರೆ.

“ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ದೇಶದ ರಾಜಧಾನಿಯೇ ಸುರಕ್ಷಿತವಾಗಿರದಿದ್ದರೆ, ಇಡೀ ಭಾರತವು ಹೇಗೆ ಸುರಕ್ಷಿತವಾಗಿರಲು ಸಾಧ್ಯ? ಗೃಹ ಸಚಿವರ ಅಸಮರ್ಥತೆ ಮತ್ತು ನಿರ್ಲಕ್ಷ್ಯದಿಂದಲೇ ಇಂತಹ ದಾರುಣ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ. ಪುಲ್ವಾಮಾ ಬಳಿ 40 ಭಾರತೀಯ ವೀರ ಯೋಧರನ್ನ ಬಲಿ ಪಡೆದುಕೊಂಡಿದ್ದು, ಪಹಲ್ಗಾಮ್‌ನಲ್ಲಿ ಅಮಾಯಕ 26 ಪ್ರವಾಸಿಗರ ಬಲಿ, ರಾಷ್ಟ್ರ ರಾಜಧಾನಿಯಲ್ಲೇ ಭೀಕರ ಬಾಂಬ್ ಸ್ಪೋಟ ಹೀಗೆ ಸಾಲು ಸಾಲು ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿದ್ದರು ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮಾಯಕ ಜನರ ಪ್ರಾಣಗಳು ರಾಜಕೀಯ ಆಟಗಳಿಗೆ ಬಲಿಯಾಗುತ್ತಿರುವುದು ಅಕ್ಷಮ್ಯ. ಜನರ ಜೀವ ಮತ್ತು ಸುರಕ್ಷತೆಯ ಖಾತ್ರಿ ನೀಡಬೇಕಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿರುವ ಭದ್ರತಾ ವ್ಯವಸ್ಥೆ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿರುವಾಗ, ನೈತಿಕ ಹೊಣೆಹೊತ್ತು ಗೃವ ಸಚಿವ ಅಮಿತ್ ಶಾ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ದೆಹಲಿಯ ಜನತೆಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು, ಮತ್ತು ಭದ್ರತಾ ವ್ಯವಸ್ಥೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...