ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

Date:

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್‌ ರವಿಕುಮಾರ್‌ ವಿರುದ್ಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದ ವಿಧಾನ ಪರಿಷತ್ ಮುಖ್ಯ‌ ಸಚೇತಕ ಸಲೀಂ ಅಹಮದ್ ನಿಯೋಗ ಮನವಿ ಸಲ್ಲಿಸಿದೆ.

ಗುರುವಾರ ಸಭಾಪತಿಗಳನ್ನು ಭೇಟಿಯಾದ ಸಲೀಂ ಅಹ್ಮದ್‌ ನಿಯೋಗವು, ಎನ್‌ ರವಿಕುಮಾರ್‌ ಹೇಳಿಕೆ ಸಾರ್ವಜನಿಕವಾಗಿ ಮತ್ತು ಮಾಧ್ಯಮ/ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಗೊಂಡಿದ್ದು, ಅಧಿಕಾರಿಕ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿ ವ್ಯಕ್ತಿತ್ವವನ್ನು ಅವಹೇಳನಗೊಳಿಸುವ ಕೆಲಸವಾಗಿದೆ. ಈ ರೀತಿಯ ಹೇಳಿಕೆಗಳು ಸರ್ಕಾರದ ಅತೀ ಉನ್ನತ ಪದವಿಯ ನಾಗರಿಕ ಸೇವಾಧಿಕಾರಿಗಳ ಧೈರ್ಯ ಮತ್ತು ಪ್ರಾಮಾಣಿಕತೆಗೆ ಚ್ಯುತಿ ತರುತ್ತದೆ” ಎಂದು ಮನವರಿಕೆ ಮಾಡಿತು.

ಎನ್‌ ರವಿಕುಮಾರ್‌ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಧಾನ ಪರಿಷತ್‌ನ ನಿಯಮಗಳು ಹಾಗೂ ನೈತಿಕ ಮಾರ್ಗಸೂಚಿಗಳ ಪ್ರಕಾರ ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸಭಾಪತಿಗಳನ್ನು ನಿಯೋಗ ಆಗ್ರಹಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತ್ವರಿತ ಕ್ರಮ ಕೈಗೊಂಡಲ್ಲಿ ಸಾರ್ವಜನಿಕ ಸೇವೆಯ ಗೌರವ ಮತ್ತು ಪರಿಷತ್ತಿನ ಪವಿತ್ರತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಈ ನಡೆ ಸಂಸತ್ತಿನ ನೀತಿ ಸಂಹಿತೆಯ ನಿಯಮಗಳಿಗೆ ವಿರುದ್ಧವಾಗಿದ್ದು, ಮಹಿಳಾ ಅಧಿಕಾರಿಗಳಿಗೆ ಅಗೌರವ ಪ್ರದರ್ಶಿಸುವ ಪ್ರವೃತ್ತಿಯಾಗಿರುತ್ತದೆ. ವ್ಯಕ್ತಿಗತ ನಿಂದನೆ ಮಾಡುವ ಮೂಲಕ, ಸಮಾಜದಲ್ಲಿ ಕೀಳು ಅಭಿರುಚಿ ಎಬ್ಬಿಸುವ ಈ ಹೇಳಿಕೆ ವಿಧಾನ ಪರಿಷತ್ ಸದಸ್ಯನ ಸ್ಥಾನಕ್ಕೆ ಒಪ್ಪದಂತಹ ಹಾಗೂ ಪರಿಷತ್ತಿನ ಗೌರವವನ್ನು ಕುಗ್ಗಿಸುವ ಪ್ರವೃತ್ತಿಯಾಗಿರುತ್ತದೆ” ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಸಲೀಂ ಅಹಮದ್ ನಿಯೋಗದಲ್ಲಿ ಬಿ ಕೆ ಹರಿಪ್ರಸಾದ್, ಮಂಜುನಾಥ್ ಭಂಡಾರಿ, ನಾಗರಾಜ ಯಾದವ್, ಬಲ್ಕಿಸ್ ಬಾನು
ಮಲ್ಲಾಜಮ್ಮ, ರಾಮೋಜಿ ಗೌಡ, ಡಿಟಿ ಶ್ರೀನಿವಾಸ್ ಹಾಗೂ ರಮೇಶ್ ಬಾಬು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...