ಡೆಂಘೀ ಸಾಂಕ್ರಾಮಿಕ ಕಾಯಿಲೆ: ರಾಜ್ಯ ಸರ್ಕಾರದಿಂದ ಅಧಿಸೂಚನೆ

Date:

ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ.

ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲವಾಗುವವರಿಗೆ ದಂಡ ವಿಧಿಸಲಾಗುತ್ತದೆ. ಕಟ್ಟಡ ಅಥವಾ ಜಮೀನಿನ ಮಾಲೀಕರು, ಬಾಡಿಗೆದಾರರು ತಮ್ಮ ವಾಸಸ್ಥಳಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಕಟ್ಟಡ, ಜಮೀನಿನಲ್ಲಿ ನೀರು ಶೇಖರಣೆ, ಅನುಪಯುಕ್ತ ಟ್ಯಾಂಕ್‌ಗಳು ಇಲ್ಲದಂತೆ ಎಚ್ಚರವಹಿಸಬೇಕು ಎಂದು ಸೂಚಿಸಲಾಗಿದೆ.

ಜಮೀನು, ಕಟ್ಟಡ, ನೀರಿನ ಟ್ಯಾಂಕ್‌ಗಳು, ಉದ್ಯಾನ, ಆಟದ ಮೈದಾನ ಸೇರಿದಂತೆ ಇತರೆ ಸ್ವತ್ತುಗಳ ಮಾಲೀಕರು, ಸ್ವಾಧೀನಾನುಭವದಲ್ಲಿ ಇರುವವರು ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಕಡ್ಡಾಯ. ನೀರಿನ ಶೇಖರಣಾ ಪಾತ್ರೆಗಳು, ಸಂಪ್‌ ಮತ್ತು ಓವರ್‌ಹೆಡ್‌ ಟ್ಯಾಂಕ್‌ಗಳನ್ನು ಸುರಕ್ಷಿತವಾಗಿ ಮುಚ್ಚಿರುವುದನ್ನು ಖಚಿತಪಡಿಸಿಕೊಂಡು ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಬೇಕು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಡೆಂಘೀ ನಿಯಂತ್ರಣಾ ಕ್ರಮಗಳನ್ನು ಜಾರಿಗೆ ತರುವುದು, ಕಾಲ ಕಾಲಕ್ಕೆ ಅದನ್ನು ಪರಿಶೀಲಿಸುವ ಜತೆಗೆ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬೆಂಗಳೂರು ಹೊರತುಪಡಿಸಿ, ಉಳಿದ ಜಿಲ್ಲೆಗಳ ಅಧಿಕಾರ ವ್ಯಾಪ್ತಿಗೆ ಮಾತ್ರ ಸಕ್ಷಮ ಪ್ರಾಧಿಕಾರ ರಚಿಸಲಾಗುತ್ತದೆ. ಸಕ್ಷಮ ಪ್ರಾಧಿಕಾರ ಜಾರಿಗೊಳಿಸುವ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾಲನೆ ಮಾಡದಿದ್ದರೆ, ಅಂಥವರಿಗೆ ದಂಡ ಹಾಕುವ ಅಧಿಕಾರ ಪ್ರಾಧಿಕಾರಕ್ಕಿದೆ.

ನಿಯಮ ಪಾಲಿಸದಿದ್ದರೆ ದಂಡ

ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುಟುಂಬಗಳಿಗೆ ಕ್ರಮವಾಗಿ 800 ರೂ. ಮತ್ತು 400 ರೂ., ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲಾ-ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ ಕ್ರಮವಾಗಿ 2 ಸಾವಿರ ಮತ್ತು 1,500 ರೂ., ಪ್ರಗತಿಯಲ್ಲಿರುವ ಅಥವಾ ಸ್ಥಗಿತಗೊಂಡ ನಿರ್ಮಾಣ ಸ್ಥಳಗಳು, ಖಾಲಿ ಜಾಗಗಳಿಗೆ ಕ್ರಮವಾಗಿ 4 ಸಾವಿರ ರೂ. ಮತ್ತು 2 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಸಕ್ಷಮ ಪ್ರಾಧಿಕಾರವು ಸೂಚನೆ ನೀಡಿದ ನಂತರವೂ ನಿಯಮ ಪಾಲಿಸದಿದ್ದರೆ ಹೆಚ್ಚುವರಿಯಾಗಿ ಶೇ 50ರಷ್ಟು ದಂಡ ಹಾಕಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಡೆಂಘೀ ಪ್ರಕರಣಗಳ ಸಂಖ್ಯೆ

ಆರೋಗ್ಯ ಇಲಾಖೆಯ ನೀಡಿರುವ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ 30,719 ಜನರಲ್ಲಿ ಡೆಂಘೀ ಜ್ವರ ಪತ್ತೆಯಾಗಿದ್ದು, ಆ ಪೈಕಿ 30,336 ಮಂದಿ ಗುಣಮುಖರಾಗಿದ್ದಾರೆ. ಸದ್ಯ, ರಾಜ್ಯಾದ್ಯಂತ 367 ಸಕ್ರಿಯ ಪ್ರಕರಣಗಳಿವೆ. ಒಟ್ಟು 16 ಜನರು ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...