ದೇವನಹಳ್ಳಿ ಚಲೋ | ಹೋರಾಟಗಾರರಿಗೆ ಪೊಲೀಸರಿಂದ ಅಡ್ಡಿ, ಶುರುವಾದ ಬೃಹತ್ ಹೋರಾಟ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 1777 ಎಕರೆ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ನಡೆಸುತ್ತಿರುವ ದೇವನಹಳ್ಳಿ ಚಲೋಗೆ ಪೊಲೀಸರು ಅಡ್ಡಿಪಡಿಸುವ ಕೆಲಸ ಮಾಡಿದ್ದಾರೆ.

1180 ದಿನಗಳಿಂದ 13 ಗ್ರಾಮಗಳ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮತ್ತು ರಾಜ್ಯ ಸರ್ಕಾರದ ಅಂತಿಮ ಆದೇಶವನ್ನು ವಿರೋಧಿಸಿ ಸಂಯುಕ್ತ ಹೋರಾಟ ಕರ್ನಾಟಕ ಹೋರಾಟಕ್ಕೆ ಇಳಿದಿದೆ. ರಾಜ್ಯದ ಮೂಲೆ ಮೂಲೆಗಳಿಂದ ದೇವನಹಳ್ಳಿಗೆ ರೈತರು ಧಾವಿಸಿದ್ದಾರೆ. ದೇವನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟದಲ್ಲಿ ಜಮಾಯಿಸಿದ್ದಾರೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿ ಹೊಮ್ಮಿರುವ ‘ಸಂಯುಕ್ತ ಹೋರಾಟ ಕರ್ನಾಟಕ’ವು ‘ದೇವನಹಳ್ಳಿ ಚಲೋ’ದ ನೇತೃತ್ವ ವಹಿಸಿದೆ. ವಕೀಲರು, ಕಾರ್ಮಿಕರು, ಪ್ರಾಧ್ಯಾಪಕರು, ಸಿನಿಮಾ ನಟರು, ಕಲಾವಿದರು ಹೋರಾಟದ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ದೇವನಹಳ್ಳಿಗೆ ಬರುತ್ತಿರುವ ಜನರನ್ನು, ಟ್ರಾಫಿಕ್ ನೆಪ ಹೇಳಿ ಮಾರ್ಗಮಧ್ಯೆದಲ್ಲೇ ತಡೆಯುವ ಕೆಲಸವನ್ನು ಪೊಲೀಸರು ಮಾಡಿದ್ದಾರೆಂದು ಹೋರಾಟಗಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವನಹಳ್ಳಿ ಚಲೋ ಹೋರಾಟ ಸ್ಥಳಕ್ಕೆ ಬರದಂತೆ ಹೋರಾಟಗಾರರನ್ನು ತಡೆಯುತ್ತಿರುವ ಪೊಲೀಸರಿಗೆ ಎಚ್ಚರಿಕೆ ನೀಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು, ಶಾಂತಿಯುತ ಹೋರಾಟಕ್ಕೆ ಅನುವು ಮಾಡಿಕೊಡಿ ಎಂದು ಕೋರಿದ್ದಾರೆ.

ಹೋರಾಟಗಾರರಾದ ಎಚ್.ಎಸ್.ಬಸವರಾಜಪ್ಪ, ಪ್ರಕಾಶ್ ಕಮ್ಮರಡಿ, ಪ್ರಕಾಶ್ ರಾಜ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಎಸ್‌ ವರಲಕ್ಷ್ಮಿ, ನೂರ್ ಶ್ರೀಧರ್, ಗುರುಪ್ರಸಾದ್ ಕೆರಗೋಡು, ʼಮುಖ್ಯಮಂತ್ರಿʼ ಚಂದ್ರು, ಮಾವಳ್ಳಿ ಶಂಕರ್, ಅನುಸೂಯಮ್ಮ, ಮೀನಾಕ್ಷಿ ಸುಂದರಂ, ಇಂದಿರಾ ಕೃಷ್ಣಪ್ಪ, ಶಿವಪ್ರಸಾದ್, ನಾಗರಾಜ್, ಶಿವಪ್ಪ, ಅಪ್ಪಣ್ಣ, ತಾರಾ ರಾವ್, ಚಂದ್ರಪ್ಪ ಹೊಸಕೆರೆ, ವಸಂತಕುಮಾರ್, ಕೆ.ಎನ್.ಉಮೇಶ್, ಶಿವಾನಂದ, ಮಹೇಶ್ ಪ್ರಭು, ಮಲ್ಲಯ್ಯ, ಲಕ್ಷ್ಮಿನಾರಾಯಣ ರೆಡ್ಡಿ, ನಾಗರತ್ನ, ಪ್ರಭಾ ಬೆಳವಂಗಲ, ಅಪ್ಪಣ್ಣ, ನಿರ್ವಾಣಪ್ಪ, ಶ್ರೀನಿವಾಸ್, ಸಿದ್ದರಾಜು, ನಂಜಪ್ಪ, ರಾಮೇಗೌಡ, ಅಶ್ವತ್ಥ, ರಾಮಚಂದ್ರಪ್ಪ, ಗೋವಿಂದರಾಜು, ಶಿವಮೊಗ್ಗ ನಾರಾಯಣಸ್ವಾಮಿ, ಮಹಿಮಾ ಪಟೇಲ್, ಎಸ್.ಜಿ.ಸಿದ್ದರಾಮಯ್ಯ ಹಲವಾರು ಜನರು ವೇದಿಕೆಯಲ್ಲಿದ್ದಾರೆ.

WhatsApp Image 2025 06 25 at 12.01.22
WhatsApp Image 2025 06 25 at 11.43.05
1 34
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...