ನಂದಿಬೆಟ್ಟದ ಸಂಪುಟ ಸಭೆಯಲ್ಲಿ ಚರ್ಚೆಗೆ ಬಾರದ ‘ದೇವನಹಳ್ಳಿ ಭೂಸ್ವಾಧೀನ’ ವಿಚಾರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ (ಜು.2) ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಆ ಭಾಗದ ಪ್ರಮುಖ ವಿಚಾರವಾದ ‘ದೇವನಹಳ್ಳಿ ಭೂಸ್ವಾಧೀನ’ ಸಂಗತಿಯೇ ಚರ್ಚೆಗೆ ಬರಲಿಲ್ಲ.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತಮ್ಮ ಪರವಾದ ನಿರ್ಣಯಕ್ಕೆ ಬರಲು ನೈತಿಕ ಬೆಂಬಲ ತುಂಬುವ ಸಲುವಾಗಿ ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಬವಿಷ್ಯ ನಿಮ್ಮ ಕೈಯಲ್ಲಿದೆ” ಎಂದು ಚನ್ನರಾಯಪಟ್ಟಣ ನಾಡ ಕಚೇರಿ ಮುಂದೆ ಉಪವಾಸ ಧರಣಿ ಕುಳಿತಿದ್ದರೂ ಸರ್ಕಾರ ರೈತರ ಬಗ್ಗೆ ಸಂಪುಟ ಸಭೆಯಲ್ಲಿ ತುಟಿಬಿಚ್ಚಲಿಲ್ಲ.

‘ದೇವನಹಳ್ಳಿ ಚಲೋ’ ವೇಳೆ ಪ್ರಗತಿಪರ ಚಿಂತಕರು, ನಟರೂ, ಸಾಹಿತಿಗಳು, ಕಲವಿದರೂ ಸೇರಿದಂತೆ ಎಲ್ಲರೂ ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ ಜುಲೈ 4ರಂದು ಸರ್ಕಾರ ರೈತಮುಖಂಡರ, ಹೋರಾಟಗಾರರ ಸಭೆ ಕರೆದಿದೆ. ಶುಕ್ರವಾರದ ಸಭೆಯಲ್ಲಾದರೂ ಸರ್ಕಾರ ರೈತರ ಬೇಡಿಕೆ ಈಡೇರಿಸುತ್ತಾ ಕಾದುನೋಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಸಂಪುಟದ ತೀರ್ಮಾನಗಳು

ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ. ಒಟ್ಟು 48 ವಿಷಯಗಳು ಚರ್ಚೆಯಾದವು. ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ, 3400 ಕೋಟಿ ರೂ.ಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಆಂಜನೇಯ ರೆಡ್ಡಿ

ವ್ಯಾಲಿಗಳ ಹೆಸರಲ್ಲಿ ವಂಚನೆ: ಆಂಜನೇಯ ರೆಡ್ಡಿ

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಅವರು ಸಚಿವ ಸಂಪುಟ ಸಭೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಪಂಚ ನದಿಗಳು ಉಗಮವಾಗುವ ಐತಿಹಾಸಿಕ ನಂದಿ ಗಿರಿಧಾಮಕ್ಕೆ ಬಂದರೂ, ಯಾವುದೇ ವಿಶೇಷ ಘೋಷಣೆಗಳಿಲ್ಲದೆಯೇ ಸಿದ್ದರಾಮಯ್ಯನವರ ಸಚಿವ ಸಂಪುಟ ಸಭೆ ಮುಗಿದಿದೆ. ಸುರಕ್ಷಿತ ಕುಡಿಯುವ ನೀರು ಮತ್ತು ಕೃಷಿಗೆ ನೀರಾವರಿ ಭದ್ರತೆ ನಮ್ಮ ಸಾಂವಿಧಾನಿಕ ಹಕ್ಕು, ಎತ್ತಿನಹೊಳೆ ಹೆಸರಲ್ಲಿ ಮೋಸ , ವ್ಯಾಲಿಗಳ ಹೆಸರಲ್ಲಿ ವಂಚನೆ ಮುಂದುವರೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನೀರಿನ ಮೂಲಗಳೇ ನಾಶವಾಗಿ ನಮ್ಮ ಆರೋಗ್ಯ, ಆದಾಯ ಬುಡಮೇಲಾಗಿ ಸಾಮಾಜಿಕ ಅಭದ್ರತೆ ಕಾಡುತ್ತಿದ್ದರೂ, ಸ್ಪಂದಿಸದ ಸರ್ಕಾರವು ಬಯಲುಸೀಮೆಯ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಸರ್ಕಾರವು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆಗಳ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ತಾರತಮ್ಯ ಮಾಡುತ್ತಿರುವ ಸರ್ಕಾರದ ಮೇಲೆ ಭರವಸೆಯಿಟ್ಟು ಮತ್ತಷ್ಟು ಕಾಲ ಕಾಯಲು ಸಾಧ್ಯವಿಲ್ಲ, ಜಿಲ್ಲೆಗಳು ಸರ್ವನಾಶವಾಗುವ ಮೊದಲೇ ಎಚ್ಚರಗೊಳ್ಳುವಂತೆ ಜನರನ್ನು ಜಾಗೃತಗೊಳಿಸುತ್ತೇವೆ. ನಮ್ಮ ಮುಂದಿನ ಪೀಳಿಗೆಗಳ ಉಳಿವಿಗಾಗಿ ಉಗ್ರ ಹೋರಾಟ ಅನಿವಾರ್ಯ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...