ಧರ್ಮಸ್ಥಳ ಪ್ರಕರಣ | ಬುರುಡೆ ತೆಗೆದಿದ್ದ ಜಾಗದಲ್ಲಿ ಶೋಧ ಕೆಲಸ ಆರಂಭ; ಕುತೂಹಲ ಹುಟ್ಟಿಸಿದ 2ನೇ ದಿನದ ಅಗೆತ

Date:

ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರು ತಾನು ಹೂತಿದ್ದ ನೂರಾರು ಕಳೇಬರಗಳನ್ನು ತೆಗೆಯುತ್ತೇನೆಂದು ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ ಹಾಗೂ ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಎರಡನೇ ದಿನ ಅಗೆತ ಕಾರ್ಯ ಮುಂದುವರೆದಿದೆ. ಎಸ್‌ಐಟಿ ಅಧಿಕಾರಿ ಅನುಚೇತ್‌ ಸೇರಿದಂತೆ ಹಲವಾರು ಅಧಿಕಾರಿಗಳು ಸ್ಥಳದಲ್ಲಿ ನಿಂತು ಅಗೆತ ಕಾರ್ಯವನ್ನು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಧರ್ಮಸ್ಥಳದ ಅಸಹಜ ಸಾವುಗಳಿಗೆ ಸಂಬಂಧಿಸಿದ ದೇಹಗಳನ್ನು ತಾನೇ 15 ವರ್ಷಗಳ ಹಿಂದೆ ಮಣ್ಣುಮಾಡಿದ್ದಾಗಿ ಹೇಳಿಕೊಂಡ ʼವ್ಯಕ್ತಿಯೊಬ್ಬರುʼ ತೋರಿಸಿದ ಜಾಗದಲ್ಲಿ ನಿನ್ನೆಯಿಂದ ಅಗೆತ ಶುರುವಾಗಿದೆ. ನಿನ್ನೆ ಯಾವುದೇ ದೇಹದ ಮೂಳೆ ತಲೆಬುರುಡೆಗಳು ಸಿಕ್ಕಿರಲಿಲ್ಲ. ಈ ವರೆಗೆ ತಾನು ದೇಹಗಳನ್ನು ಹೂತಿರುವ 20ಕ್ಕೂ ಹೆಚ್ಚು ಜಾಗಗಳನ್ನು ವ್ಯಕ್ತಿಯು ಎಸ್‌ಐಟಿ ತಂಡಕ್ಕೆ ತೋರಿಸಿದ್ದು ಅವುಗಳಿಗೆ ನಂಬರ್‌ ನೀಡಿ ಗುರುತು ಮಾಡಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ದಿನಾದ ಇಂದು ಅಗೆಯುತ್ತಿರುವ ಜಾಗದಿಂದಲೇ ಆ ವ್ಯಕ್ತಿಯು ತಲೆಬುರುಡೆಯೊಂದನ್ನು ಎತ್ತಿಕೊಂಡು ಹೋಗಿ ಪೊಲೀಸರ ಎದುರು ಹಾಜರುಪಡಿಸಿದ್ಧಾರೆ ಎನ್ನಲಾಗಿದೆ. ಅಲ್ಲದೆ ಅದೇ ಜಾಗದಲ್ಲಿ ಇನ್ನೂ ಐದಾರು ಹೆಣ್ಣುಮಕ್ಕಳ ದೇಹಗಳನ್ನು ಹೂಳಲಾಗಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಕಾರಣದಿಂದ ಇಂದು ಬೆಳಿಗ್ಗೆ 8 ಗಂಟೆಯಿಂದಲೇ ನಡೆಯುತ್ತಿರುವ ಅಗೆತ ಬಹಳ ಕುತೂಹಲ ಹುಟ್ಟಿಸಿದೆ.

ನಿನ್ನೆ ಇಡೀ ದಿನ ಒಂದು ಜಾಗದಲ್ಲಿ ಅಗೆತ ಮಾಡಲಾಗಿತ್ತು. ಮಧ್ಯಾಹ್ನದ ನಂತರ ಜೆಸಿಬಿ ಯಂತ್ರಗಳನ್ನು ಸಹ ತರಿಸಿ ಅಗೆಸಿಲಾಗಿತ್ತು. ಆದರೆ ಯಾವುದೇ ಕಳೇಬರದ ಅವಶೇಷಗಳು ಸಿಕ್ಕಿರಲಿಲ್ಲ. ʼವ್ಯಕ್ತಿʼಯು ಗುರುತು ಮಾಡಿರುವ ಎಲ್ಲ ಕಡೆಗಳಲ್ಲಿ ಎಸ್‌ಐಟಿ ಅಗೆತವನ್ನು ಅಗೆತವನ್ನು ನಡೆಸಲಿದ್ದು ಇಡೀ ರಾಜ್ಯವೇ ಇತ್ತ ಕುತೂಹಲದಿಂದ ಏನು ನಡೆಯುತ್ತದೆ ಎಂದು ಇದಿರು ನೋಡುತ್ತಿದೆ. ಇನ್ನು ಅಗೆತ ನಡೆಯುತ್ತಿರುವ ಜಾಗದ ಸುತ್ತಮುತ್ತ ಸ್ಥಳೀಯರು, ಹೊರ ಊರುಗಳ ಜನರು ಸಾವಿರಾರು ಸಂಖ್ಯೆಯಲ್ಲಿ ನೆರೆದು ದೂರದಿಂದಲೇ ವೀಕ್ಷಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...