ಧರ್ಮಸ್ಥಳ ಪ್ರಕರಣ‌ | ಹುಲಿಗೆ ರಕ್ತದ ರುಚಿ ಸಿಕ್ಕಿದೆ, ಬೇರೆ ದೇವಸ್ಥಾನದ ಮೇಲೂ ದಾಳಿ ನಡೆಯಬಹುದು: ಬಿ ಎಲ್‌ ಸಂತೋಷ್

Date:

ಧರ್ಮಸ್ಥಳ ಪ್ರಕರಣ ಗಮನಿಸಿದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ. ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣ ಮಠದ ಮೇಲೂ ಇಂತಹ ಆಕ್ರಮಣ ನಡೆದಿತ್ತು. ಇನ್ನು ಸ್ವಲ್ಪ ದಿನ ತಡೆದರೆ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯಬಹುದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ.

ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿ, “ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವುದು ವೈಚಾರಿಕ ಆಕ್ರಮಣ. ನಾವು ಇದನ್ನು ಎದುರಿಸಬೇಕಿದೆ. ಇದೆ ನಮ್ಮ ಮುಂದಿರುವ ಸವಾಲು” ಎಂದು ತಿಳಿಸಿದರು.

“ಈಗಾಗಲೇ ವೈಚಾರಿಕವಾಗಿರುವ ವಾಮಪಂಥೀಯರು, ರಾಜಕೀಯ ಶಕ್ತಿಗಳು ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದ್ದಾರೆ. ಈಶ ಆಶ್ರಮದಲ್ಲಿ, ಶನಿ ಶಿಂಗ್ನಾಪುರದಲ್ಲಿ ರಕ್ತದ ರುಚಿ ನೋಡಿದರು. ಧರ್ಮಸ್ಥಳದಲ್ಲೂ ಅದನ್ನೇ ಪ್ರಯತ್ನಿಸುತ್ತಿದ್ದಾರೆ” ಎಂದು ಮಾರ್ಮಿಕವಾಗಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಂಭಮೇಳದ ಬಗ್ಗೆಯೂ ಸಾಕಷ್ಟು ಅಪಪ್ರಚಾರಗಳು ನಡೆದವು. ಆದರೆ ನಂಬಿಕೆ ಗೆದ್ದಿದೆ. ನಮ್ಮ ದೇಶದಲ್ಲಿ ಹಿಂದುತ್ವದ ಬಗ್ಗೆ ಗಟ್ಟಿ ನಂಬಿಕೆ ಇದೆ. ಅಪಪ್ರಚಾರ ಮಾಡಿದಷ್ಟು ಅಲ್ಲಿಗೆ ಹೆಚ್ಚು ಜನರು ಹೋಗಿ ಬಂದರು” ಎಂದರು.

“ಈಗ ನಡೆದಿರುವ ಆಕ್ರಮಣಗಳಿಗೆ ಶಿಕ್ಷೆ ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಲಿ. ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ಉತ್ತರ ಕೊಡಲು ಸಿದ್ಧ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುನಿಲ್‌ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಲಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...