ಧರ್ಮಸ್ಥಳ | ‘ಪದ್ಮಲತಾ ಕಳೇಬರ ಹೊರತೆಗೆದು ಮರುತನಿಖೆ ನಡೆಸಿ’; SITಗೆ ಸಹೋದರಿ ಇಂದ್ರಾವತಿ ದೂರು

Date:

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೇಬರವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ" ಎಂದಿದ್ದಾರೆ ಇಂದ್ರಾವತಿ.

38 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ಎಸ್‌ಐಟಿಗೆ ಪದ್ಮಲತಾ ಸಹೋದರಿ ಇಂದ್ರಾವತಿ ದೂರು ನೀಡಿದ್ದಾರೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಬೆನ್ನಲ್ಲೇ ಹಳೆಯ ಪ್ರಕರಣಗಳೆಲ್ಲ ಮುನ್ನೆಲೆಗೆ ಬರುತ್ತಿವೆ. ಇಂದು (ಸೋಮವಾರ) ಬೆಳಿಗ್ಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ತೆರಳಿದ ಪದ್ಮಲತಾ ಅವರ ಅಕ್ಕ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿಯ ಈ ಅಪಹರಣ, ಅತ್ಯಾಚಾರ, ಕೊಲೆ ಆಗಿರುವ ಕಾರಣ ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

pl 1
ಪದ್ಮಲತಾ

ಇದನ್ನೂ ಓದಿರಿ: GROUND REPORT: ಸಾಮಾನ್ಯರ ಬದುಕು ಹೈರಾಣಾದ ‘ಧರ್ಮಸ್ಥಳ’ದಲ್ಲಿ ಕಂಡಿದ್ದಿಷ್ಟು…

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

ದೇವಾನಂದರ ಹೋರಾಟ ಹತ್ತಿಕ್ಕಲು ಮಗಳ ಕೊಲೆ?

ಸ್ಥಳೀಯ ಕಮ್ಯುನಿಸ್ಟ್ ನಾಯಕರಾಗಿದ್ದ ಎಂ.ಕೆ. ದೇವಾನಂದ ಅವರು ಅನ್ಯಾಯಗಳ ವಿರುದ್ಧ ಹೋರಾಡುತ್ತಿದ್ದವರು. ಅವರನ್ನು ಬೆದರಿಸಲೆಂದೇ ಮಗಳ ಮೇಲೆ ಅತ್ಯಾಚಾರ ನಡೆಸಿ, ಭೀಕರವಾಗಿ ಕೊಲೆ ಮಾಡಲಾಯಿತು ಎನ್ನುತ್ತಾರೆ ಹೋರಾಟಗಾರರು.

pl 2
ದಿವಂಗತ ಎಂ.ಕೆ. ದೇವಾನಂದ

1986ರವರೆಗೂ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆದಿರಲಿಲ್ಲ. ಇಲ್ಲಿನ ಪ್ರಭಾವಿಗಳು ಸೂಚಿಸಿದವರಷ್ಟೇ ಗ್ರಾಪಂ ಅಧ್ಯಕ್ಷರಾಗಿ ಮುಂದುವರಿಯುತ್ತಿದ್ದರು. ಇದನ್ನು ಗಮನಿಸಿದ ಸಿಪಿಐಎಂ, ಚುನಾವಣೆಗೆ ನಿಲ್ಲಲು ನಿರ್ಧರಿಸಿತು. ದೇವಾನಂದರನ್ನು ಅಭ್ಯರ್ಥಿಯನ್ನಾಗಿ ಮಾಡಿತು. “ನೀವು ನಾಮಪತ್ರ ವಾಪಸ್ ಪಡೆಯಬೇಕು” ಎಂದು ಪ್ರಭಾವಿಗಳು ಬೆದರಿಸಿದ್ದರು. ಆದರೆ ಇದ್ಯಾವುದಕ್ಕೂ ಹೆದರದ ದೇವಾನಂದರು, “ಇದು ಪಾರ್ಟಿಯ ನಿರ್ಧಾರ. ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು. ಆನಂತರ ಪದ್ಮಲತಾ ಅಪಹರಣಕ್ಕೊಳಗಾದರು. ಎರಡು ತಿಂಗಳ ಬಳಿಕ ಕಳೇಬರದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆಕೆಯ ಬಟ್ಟೆಯನ್ನು ನೋಡಿ, ಗುರುತು ಹಚ್ಚಲಾಯಿತು. “ಧರ್ಮಸ್ಥಳ ರಿಪಬ್ಲಿಕ್‌ನಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದು, ಪ್ರಜಾಪ್ರಭುತ್ವ ಉಳಿಯಲು ಕಾರಣವಾದ ದೇವಾನಂದರು ತಮ್ಮ ಮಗಳನ್ನು ಈ ಹೋರಾಟದಲ್ಲಿ ಕಳೆದುಕೊಂಡರು” ಎನ್ನುತ್ತಾರೆ ಸ್ಥಳೀಯ ಕಮ್ಯುನಿಸ್ಟ್ ನಾಯಕರು.

“ಚುನಾವಣೆಗೆ ಸ್ಪರ್ಧಿಸಿದ್ದಷ್ಟೇ ಅಲ್ಲ, ಶೋಷಿತ ಮಲೆಕುಡಿಯ ಸಮುದಾಯದವರ ಭೂಮಿಯನ್ನು ಉಳಿಸಲು ದೇವಾನಂದರು ಹೋರಾಡಿದ್ದರು. ಪ್ರಭಾವಿಗಳ ವಿರುದ್ಧ ನಿಂತು, ಮಲೆಕುಡಿಯರಿಗೆ ಭೂಮಿಯನ್ನು ಉಳಿಸಿದ್ದರು. ಈ ಎಲ್ಲ ಕಾರಣಕ್ಕೆ ದೇವಾನಂದರನ್ನು ಈ ರೀತಿಯಲ್ಲಿ ಬೆದರಿಸಲಾಯಿತು” ಎನ್ನುತ್ತಾರೆ ಚಳವಳಿಗಾರರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...