ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಸಚಿವ ದಿನೇಶ್ ಗುಂಡೂರಾವ್

Date:

  • ಸದ್ಯಕ್ಕೆ ಡಯಾಲಿಸಿಸ್ ಸೇವೆ ಆಸ್ಪತ್ರೆ ಸಿಬ್ಬಂದಿಗಳಿಂದ ನಿರ್ವಹಿಸಲು ಸೂಚನೆ
  • ‘ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ಕೆಲವು ಬಾಕಿ ವೇತನ ಕೊಡಿಸಲಾಗಿದೆ’

ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಕೆಲಸ ಮಾಡುತ್ತಿರುವೆ” ಎಂದರು.

“ಹಿಂದಿನ ಸರ್ಕಾರ ಎರಡು ಏಜೆನ್ಸಿಯವರಿಗೆ ಡಯಾಲಿಸಿಸ್ ನಿರ್ವಹಣೆಗೆ ಕೊಟ್ಟಿತ್ತು. ಅದರಲ್ಲಿ ಬಿಆರ್‌ಎಸ್‌ನವರು ಅರ್ಧದಲ್ಲೇ ಕಾರ್ಯ ಸ್ಥಗಿತಗೊಳಿಸಿದ್ದರು. ಬಳಿಕ ಇಎಸ್‌ಕೆಇಜಿ ಸಂಸ್ಥೆಯವರಿಗೆ ನೀಡಲಾಗಿತ್ತು. ಈ ಸಂಸ್ಥೆಯವರು ಡಯಾಲಿಸಿಸ್ ಕೇಂದ್ರಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬುದರ ಬಗ್ಗೆ ಸಾರ್ವಜನಿಕರು ಹಾಗೂ ಸಿಬ್ಬಂದಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಯಾಲಿಸಿಸ್ ಕೇಂದ್ರಗಳಲ್ಲಿ ವೈದ್ಯರನ್ನ ನೇಮಿಸಿರಲಿಲ್ಲ. ಅಲ್ಲದೇ ಏಜೆನ್ಸಿಯವರು ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ಕೊಡುತ್ತಿರಲಿಲ್ಲ. ಇಎಸ್ಸೈ, ಪಿಎಫ್ ಕಟ್ಟಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು” ಎಂದು ತಿಳಿಸಿದರು.

“ಡಯಾಲಿಸಿಸ್ ಆರೋಗ್ಯ ಸೇವೆ ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ನಾವು ನಾಲ್ಕು ವಿಭಾಗವಾರು ಹೊಸ ಟೆಂಡರ್ ದಾರರನ್ನ ಆಹ್ವಾನಿಸಿ, ಬಹುತೇಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ.‌ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಡಯಾಲಿಸಿಸ್ ಕೇಂದ್ರಗಳಲ್ಲಿ ಪಿಪಿಪಿ ಮಾದರಿಯಲ್ಲಿ ಹೊಸ ಯಂತ್ರಗಳನ್ನ ಅಳವಡಿಸಲು ಕ್ರಮವಹಿಸಲಾಗಿದೆ. ಸೊಂಕು ರಹಿತವಾದ, ಏಕ ಬಳಕೆಯ ಸುಮಾರು 800 ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳು!- ಹೇಳಿಕೆಯಾಗೇ ಉಳಿಯದಿರಲಿ, ಅನುಷ್ಠಾನಕ್ಕೂ ಬರಲಿ

“ಹೊಸ ಏಜನ್ಸಿಯವರು ಹೊಸ ಯಂತ್ರಗಳನ್ನ ಹಾಕಿ ಸೇವೆ ಆರಂಭಿಸಬೇಕು. ಒಂದು ವೇಳೆ ಇವರು ಯಂತ್ರಗಳನ್ನ ಹಾಕಲು ಮುಂದೆ ಬರಲ್ಲ ಎಂಬ ಶಂಕೆಗಳು ವ್ಯಕ್ತವಾದರೆ, ಪರ್ಯಾಯ ಮಾರ್ಗವಾಗಿ ಸರ್ಕಾರವೇ ಯಂತ್ರಗಳನ್ನ ಖರೀದಿಸಿ ಇಲಾಖೆಯಿಂದಲೇ ಡಯಾಲಿಸಿಸ್ ನಿರ್ವಹಣೆ ಮಾಡಬೇಕಾಗುತ್ತದೆ. ಈ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ” ಎಂದರು.

“ನಾವು ಸಿಬ್ಬಂದಿಗಳ ಪರವಾಗಿಯೇ ಇದ್ದೇವೆ. ಏಜನ್ಸಿಯವರು ವೇತನ ನೀಡದಿರುವುದು ನನ್ನ ಗಮನಕ್ಕೆ ಬಂದಾಗ ನಾವು ಮಧ್ಯಪ್ರವೇಶ ಮಾಡಿ ಸಿಬ್ಬಂದಿಗಳು ಹಾಗೂ ಸಂಸ್ಥೆಯವರೊಂದಿಗೆ ಚರ್ಚಿಸಿ ವೇತನ ಕೊಡಿಸುವ ಕೆಲಸ ಮಾಡಿದ್ದೇವೆ. ESI, PF ಅನ್ನ ಸಂಸ್ಥೆಯವರು ಕೊಡಬೇಕು. ಎರಡು ಸಂಸ್ಥೆಯವರನ್ನ ಕಪ್ಪು ಪಟ್ಟಿಗೆ ಸೇರಿಸಿ ಬಾಕಿ ಇರುವ ESI, PF ಅನ್ನ ಸಿಬ್ಬಂದಿಗಳಿಗೆ ಕೊಡಿಸುವಂತೆ ಅಧಿಕಾರಿಗಳು ಜೊತೆ ಚರ್ಚಿಸಿದ್ದೇನೆ” ಎಂದು ಹೇಳಿದರು.

“ವ್ಯವಸ್ಥೆ ಸರಿಪಡಿಸುವತ್ತ ಕಾರ್ಯ ನಿರ್ವಹಿಸುತ್ತಿರುವಾಗ ಡಯಾಲಿಸಿಸ್ ಸಿಬ್ಬಂದಿಗಳು ಸಹಕರಿಸಬೇಕು. ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಸದ್ಯಕ್ಕೆ ಡಯಾಲಿಸಿಸ್ ಸೇವೆಯನ್ನ ಆರೋಗ್ಯ ಸಿಬ್ಬಂದಿಗಳಿಂದಲೇ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...