ಶಕ್ತಿ ಯೋಜನೆ ಮರುಪರಿಶೀಲನೆ: ಡಿ ಕೆ ಶಿವಕುಮಾರ್ ಸುಳಿವು

Date:

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಸುಳಿವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೀಡಿದ್ದಾರೆ.

ವಿಧಾನಸೌಧದ ಮುಂಭಾಗ ಐರಾವತ ಕ್ಲಬ್‌ಕ್ಲಾಸ್–2.0 ನೂತನ ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ‘ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದು ಹಲವು ಮಹಿಳೆಯರು ಸಾಮಾಜಿಕ ಜಾಲತಾಣ ‘ಎಕ್ಸ್‌ ಹಾಗೂ ಇ–ಮೇಲ್‌ ಮೂಲಕ ಮನವಿ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವಾಗ ನಾವು ಹಣ ಕೊಡಲು ಮುಂದಾದರೂ ನಿರ್ವಾಹಕರು ನಿರಾಕರಿಸುತ್ತಾರೆ; ಆರ್ಥಿಕವಾಗಿ ಅನುಕೂಲ ಸ್ಥಿತಿಯಲ್ಲಿ ಇರುವ ಕಾರಣ ಟಿಕೆಟ್‌ ತೆಗೆದುಕೊಳ್ಳುವ ಶಕ್ತಿಯಿದ್ದು, ನಮಗೆ ಉಚಿತ ಪ್ರಯಾಣ ಬೇಡವೆಂದು ಶೇ 5ರಿಂದ 10ರಷ್ಟು ಮಹಿಳೆಯರು ಹೇಳುತ್ತಿದ್ದಾರೆ. ಈ ಕುರಿತು ಪ್ರತ್ಯೇಕ ಸಭೆ ಕರೆದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜತೆ ಚರ್ಚಿಸಲಾಗುವುದು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

‘ಕೆಎಸ್ಆರ್‌ಟಿಸಿ ಆರಂಭವಾದಾಗ ಕೇವಲ 120 ಬಸ್‌ಗಳು ಇದ್ದವು, ಇಂದು 24,282 ಬಸ್‌ಗಳು ಇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್‌ ಖರೀದಿಗೆ ಸಮ್ಮತಿ ನೀಡಿದೆ. ಅವುಗಳಲ್ಲಿ 3,400 ಬಸ್‌ಗಳನ್ನು ಖರೀದಿಸಲಾಗಿದೆ. 1.80 ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ. ಸುಮಾರು ಒಂಬತ್ತು ಸಾವಿರ ಚಾಲಕರು ಹಾಗೂ ನಿರ್ವಾಹಕರ ನೇಮಕಾತಿಗೂ ಚಾಲನೆ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಹೇಳಿದರು.

‘ಶಾಸಕನಾಗಿದ್ದ ಆರಂಭದಲ್ಲಿ ಎರಡು ಮೂರು ಬಾರಿ ಐರಾವತ ಬಸ್‌ನಲ್ಲಿ ಪ್ರಯಾಣ ಮಾಡಿದ್ದೆ. ಚುನಾವಣಾ ಸಮಯದಲ್ಲಿ ಪ್ರಚಾರಕ್ಕಾಗಿ ಐರಾವತ ಬಸ್‌ಗಳನ್ನು ಬಳಸಲಾಗುತ್ತಿತ್ತು. ಅವಕಾಶ ಸಿಕ್ಕಾಗ ಮತ್ತೆ ಪ್ರಯಾಣ ಮಾಡುವೆ’ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...