ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರಿನ ಯೋಜನೆಗಳಿಗೆ ಅನುದಾನ ಕೋರಿ ನಿರ್ಮಲಾ ಸೀತಾರಾಮನ್‌ಗೆ ಡಿ.ಕೆ. ಶಿವಕುಮಾರ್ ಪತ್ರ

Date:

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಮುಂಬರುವ ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಾಗಿರುವ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

“ಬೆಂಗಳೂರು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಪ್ರಗತಿ ಹಾಗೂ ಬಂಡವಾಳ ಹೂಡಿಕೆ ಆಕರ್ಷಣೆಯ ತಾಣವಾಗಿ ಬೆಳೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಂಡಿದ್ದು, ದೇಶದ ಯುವಕರಿಗೆ ಉದ್ಯೋಗ ಸೃಷ್ಟಿಸಿ, ಆರ್ಥಿಕ ಪ್ರಗತಿಗೆ ನೆರವಾಗಿದೆ. ಬೆಂಗಳೂರು ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ಪರಿಣಾಮ, ನಗರದ ಜನಸಂಖ್ಯೆ 1.50 ಕೋಟಿ ಸನಿಹದಲ್ಲಿದೆ. ಹೀಗಾಗಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಮಾಡಿ ಬೆಂಗಳೂರನ್ನು ದೇಶದ ಸಿಲಿಕಾನ್ ವ್ಯಾಲಿ ಎಂಬ ಹಿರಿಮೆ ಉಳಿಸಿಕೊಳ್ಳಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದ್ದು, ಮುಂಬರುವ ಬಜೆಟ್ ನಲ್ಲಿ ಈ ಯೋಜನೆಗಳಿಗೆ ಪೂರಕವಾಗಿ ಅನುದಾನ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ

ಭೂಮಿಯ ಕೊರತೆಯಿಂದಾಗಿ ಬೆಂಗಳೂರಿನಲ್ಲಿರುವ ಹಾಲಿ ರಸ್ತೆಗಳ ಅಗಲೀಕರಣ ಕಷ್ಟವಾಗಿದೆ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಹೆಚ್ ಎಸ್ ಆರ್ ಬಡಾವಣೆಯ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೂ ಉತ್ತರ- ದಕ್ಷಿಣ 18.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹15 ಸಾವಿರ ಕೋಟಿ ವೆಚ್ಚವಾಗಲಿದೆ. ಕೆ.ಆರ್ ಪುರ ವೃತ್ತದಿಂದ ನಾಯಂಡನಹಳ್ಳಿ ಜಂಕ್ಷನ್ ವರೆಗೂ 28.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹25 ಸಾವಿರ ಕೋಟಿ ವೆಚ್ಚವಾಗಲಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ 19 ಸಾವಿರ ಕೋಟಿ ಮೌಲ್ಯದ ಡಿಪಿಆರ್ ಸಿದ್ಧಪಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಮೆಟ್ರೋ ಸೇರಿದಂತೆ ಎಲಿವೆಟೆಡ್ ಕಾರಿಡಾರ್

“ನಮ್ಮ ಮೆಟ್ರೋದ ಮೂರನೇ ಹಂತದ ಹಳದಿ ಮಾರ್ಗದಲ್ಲಿ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೂ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಯಶಸ್ವಿ ಹಿನ್ನೆಲೆಯಲ್ಲಿ ಮೆಟ್ರೋ ನಾಲ್ಕನೇ ಹಂತದ ಯೋಜನೆಯನ್ನು ಡಬಲ್ ಡೆಕ್ಕರ್ ಮೂಲಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಜೆ.ಪಿ ನಗರದಿಂದ ಹೆಬ್ಬಾಳದವರೆಗೆ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೂ 45 ಕಿ.ಮೀ ಉದ್ದದ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ₹8916 ಕೋಟಿ ಅಗತ್ಯವಿದೆ” ಎಂದು ವಿವರಿಸಿ‌ದ್ದಾರೆ.

17 ಮೇಲ್ಸೇತುವೆ, 300 ಕಿ.ಮೀ ಬಫರ್ ವಲಯ ರಸ್ತೆ

“ಇವುಗಳ ಜತೆಗೆ ನಗರದ ಸಂಚಾರಿ ದಟ್ಟಣೆ ಇರುವ 11 ಜಂಕ್ಷನ್ ಗಳಲ್ಲಿ 99.50 ಕಿ.ಮೀ ನಷ್ಟು 17 ಮೇಲ್ಸೇತುವೆ ನಿರ್ಮಾಣ ಅಗತ್ಯವಿದ್ದು, ಇದಕ್ಕಾಗಿ ₹12 ಸಾವಿರ ಕೋಟಿ ಹಣ ಬೇಕಾಗಿದೆ. ಪ್ರಮುಖ ನದಿ ಹಾಗೂ ದೊಡ್ಡ ಕೆರೆಗಳು ಹಾಗೂ ರಾಜಕಾಲುವೆ ಪಕ್ಕದ ಬಫರ್ ಪ್ರದೇಶಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ. ಇದನ್ನು ತಪ್ಪಿಸಲು ಈ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹3000 ಕೋಟಿ ಅಗತ್ಯವಿದೆ” ಎಂದು ತಿಳಿಸಲಾಗಿದೆ.

ಪಿಆರ್ ಆರ್ ಹಾಗೂ ನೀರು ಸರಬರಾಜು ಯೋಜನೆ

“ಬೆಂಗಳೂರಿನ ದಟ್ಟಣೆ ನಿಯಂತ್ರಿಸಲು ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 8 ಪಥಗಳ, 73.04 ಕಿ.ಮೀ ಉದ್ದದ ಬಿಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಿದೆ. ಈ ಯೋಜನೆಯಲ್ಲಿ ₹21 ಸಾವಿರ ಕೋಟಿ ಭೂಸ್ವಾಧೀನ ಹಾಗೂ ₹6 ಸಾವಿರ ಕೋಟಿ ರಸ್ತೆ ನಿರ್ಮಾಣಕ್ಕೆ ಸೇರಿ ಒಟ್ಟು ₹27 ಸಾವಿರ ಕೋಟಿ ಅಗತ್ಯವಿದೆ. ಇನ್ನು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಪೂರೈಕೆ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರ್ಣಗೊಳಿಸಲಾಗಿದ್ದು, ಹೆಚ್ಚುವರಿ ಬೇಡಿಕೆ ಪೂರೈಸಲು ಕಾವೇರಿ 6ನೇ ಹಂತದ ಯೋಜನೆ ಮೂಲಕ 2028ರ ವೇಳೆಗೆ 500 ಎಂಎಲ್ ಡಿ ನೀರು ಪೂರೈಸುವ ಉದ್ದೇಶವಿದೆ. ಸಂಸತ್ತಿನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಾವುಗಳು ಬೆಂಗಳೂರಿನ ಈ ಪ್ರಮುಖ ಯೋಜನೆಗಳಿಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡಬೇಕು” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...