ಕುಸುಮಾವತಿಯವರ ಕಾನೂನು ಹೋರಾಟ ಯಾರ ವಿರುದ್ಧ ಎಂಬ ಪ್ರಜ್ಞೆ ಬಿಜೆಪಿಗಿದೆಯೇ: ಪ್ರಿಯಾಂಕ್‌ ಪ್ರಶ್ನೆ

Date:

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ“ ಎಂಬ ಕುಸುಮಾವತಿಯವರ ಮಾತಿಗೆ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿ ವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ.

“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ. ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ?” ಎಂದಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು “ಧರ್ಮಸ್ಥಳದಿಂದ ವಾಪಸ್ ಚಲೋ“ ಕಾರ್ಯಕ್ರಮ ಮಾಡಬೇಕಿತ್ತು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...