‘ಪ್ರಖಾಂಡ ಪಂಡಿತ’ ಪ್ರಕಾಶ್ ಬೆಳವಾಡಿಗೆ ನೆಲದ ಸಂವಿಧಾನ ತಿಳಿದಿದೆಯೇ? ಬಿ ಕೆ ಹರಿಪ್ರಸಾದ್‌ ಕಿಡಿ

Date:

ರಾಜ್ಯಸಭೆಯ ಸದಸ್ಯರಾದವರು ಪ್ರಧಾನಿಯಾಗಬಾರದೆಂದು ಯಾವ ಸಂವಿಧಾನ, ಕಾನೂನಿನಲ್ಲಿದೆ ಎಂದು ನಟ ಪ್ರಕಾಶ್ ಬೆಳವಾಡಿ ಜನರಿಗೆ ತಿಳಿಸಲಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದೇ ಕಾನೂನುಬಾಹಿರ ಎಂದು ಹೇಳಿಕೆ ನೀಡಿರುವ ಪ್ರಕಾಶ್ ಬೆಳವಾಡಿ ವಿರುದ್ಧ ಎಕ್ಸ್‌ ತಾಣದಲ್ಲಿ ಹರಿಹಾಯ್ದಿರುವ ಅವರು, “ಜಗತ್ತು ಕಂಡ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ಅಸ್ಸಾಂ ರಾಜ್ಯದಿಂದ ರಾಜ್ಯಸಭೆಗೆ ಸದಸ್ಯರಾಗಿ ಪ್ರಧಾನಿಯಾದದ್ದು ಯಾವ ಅಪರಾಧ? ಅಸ್ಸಾಂ ದೇಶದಲ್ಲಿರುವ ರಾಜ್ಯವಲ್ಲವೇ? ಕರ್ನಾಟಕದಿಂದಲೇ ಪ್ರಧಾನಿಯಾದ ಹೆಚ್ ಡಿ ದೇವೇಗೌಡರು ಕೂಡ ರಾಜ್ಯಸಭೆಯ ಸದಸ್ಯರಾಗಿಯೇ ಎನ್ನುವುದು ಬಹಿರಂಗ ಸತ್ಯ” ಎಂದಿದ್ದಾರೆ.

“ಖ್ಯಾತ ಪತ್ರಕರ್ತರಾದ ಕುಲದೀಪ್ ನಯ್ಯರ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ದೇಶದ ಪ್ರಜೆಯಾದವರು ಯಾವ ರಾಜ್ಯದಿಂದಲೂ ರಾಜ್ಯಸಭೆ ಸದಸ್ಯರಾಗಲು ಅರ್ಹರು ಎಂದು ದಾವೆ ಹೂಡಿದ ನಂತರ ಸುಪ್ರೀಂಕೋರ್ಟ್ ಕೂಡ ಅದಕ್ಕೆ ಅವಕಾಶ ನೀಡಿದೆ. ಇದು ‘ಪ್ರಖಾಂಡ ಪಂಡಿತ’ ಬೆಳವಾಡಿಗೆ ತಿಳಿದಿದೆಯೇ? ಸಂವಿಧಾನ, ಕಾನೂನಿನ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“7 ವರ್ಷದ ಬಾಲಕಿ ಮೇಲೆ ಶಾಸಕನ ತಮ್ಮನಿಂದ ಅತ್ಯಾಚಾರ ಆದರೂ, ಆತನ ಪರವಾಗಿ ವಾದ ಮಾಡುತ್ತಾ, ಕೋರ್ಟ್​​ನಲ್ಲಿ ಕಣ್ಣೀರು, ಕರುಣೆಗಿಂತಲೂ ಮುಖ್ಯವಾಗಿ ಬೇಕಿರುವುದು ಸಾಕ್ಷಿಗಳು ಎಂದು ‘ಯುದ್ಧಕಾಂಡ’ ಸಿನಿಮಾದಲ್ಲಿ ಡೈಲಾಗ್ ಹೊಡೆಯುವ ಪ್ರಕಾಶ್ ಬೆಳವಾಡಿಯವರಿಗೆ ನಿಜ ಜೀವನದಲ್ಲಿ ಮಾತಾಡುವಾಗ ಸಾಕ್ಷಿ, ದಾಖಲೆಗಳಿಲ್ಲದೆ ಪುಂಗುವುದನ್ನು ರೂಢಿ ಮಾಡಿಕೊಂಡಂತಿದೆ” ಎಂದು ಕುಟುಕಿದ್ದಾರೆ.

“ಮೋದಿಯ ಚಮಚಾಗಿರಿ ಮಾಡುತ್ತೇನೆ ಎಂದು ಬಹಿರಂಗವಾಗಿಯೇ ಘೋಷಿಸಿಕೊಂಡಿರುವ ಬೆಳವಾಡಿ, ಕನಿಷ್ಠಪಕ್ಷ ಮೋದಿ ಗುಜರಾತಿನಲ್ಲಿ ಶಾಸಕರಾಗಿ ಮುಖ್ಯಮಂತ್ರಿಯಾದರೋ, ಇಲ್ಲ ಮುಖ್ಯಮಂತ್ರಿಯಾದ ನಂತರ ಶಾಸಕರಾದರೋ ಎಂಬ ಸಾಮಾನ್ಯ ತಿಳಿವಳಿಕೆಯೂ ಇಲ್ಲದೇ ಇರುವುದು ದುರಂತ” ಎಂದು ಟೀಕಿಸಿದ್ದಾರೆ.

“ಸಂವಿಧಾನದಲ್ಲಿ ಪ್ರಧಾನಿಗಳ ಆಯ್ಕೆ, ಅಧಿಕಾರ, ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ವಿಧಿಗಳಿವೆ ಅದರ ಬಗ್ಗೆ ಎಳ್ಳಷ್ಟು ಬೆಳವಾಡಿಗೆ ತಿಳಿವಳಿಕೆ ಇಲ್ಲ, ಜ್ಞಾನವಂತೂ ಇಲ್ಲವೇ ಇಲ್ಲ. ಭಾರತದ ಪ್ರಜೆ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದರೆ ದೇಶದ ಪ್ರಧಾನಿಯಾಗಲು ಅರ್ಹತೆ ಹೊಂದಿರುತ್ತಾರೆ. ಆದರೆ ನಿಮ್ಮಂತೆ ದಿವಾಳಿಯಂತೂ ಆಗಿರಬಾರದು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಸಂವಿಧಾನದ ಪ್ರಖಾಂಡ ಪಂಡಿತರಂತೆ, ಕಾನೂನು ತಜ್ಞರಂತೆ ಸಂವಿಧಾನದ ವಿಧಿ, ವಿಧಾನಗಳು ಹಾಗೂ ಕಾನೂನುಗಳ ಬಗ್ಗೆ ವಾಚಾಮಗೋಚರ ಹಲುಬಿರುವ ಬೆಳವಾಡಿಗೆ ದೇಶದ ಮೂಲೆಯ ಯಾವ ಪ್ರಜೆಯಾದರೂ ಪ್ರಧಾನಿಯಾಗುವ ಹಕ್ಕು, ಅಧಿಕಾರ, ಅರ್ಹತೆ ಸಂವಿಧಾನವೇ ನೀಡಿದೆ ಎಂಬುದು ಗೊತ್ತಿಲ್ಲದೆ ಇರುವುದು ವಿಪರ್ಯಾಸ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...